Narendra Modi ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಯ ಸಚಿವ ಸಂಪುಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಬಹು ಪಾಲು ದೊರೆತಿದೆ. ಕರ್ನಾಟಕದಿಂದ ಐವರು, ತಮಿಳುನಾಡಿನಿಂದ ಒಬ್ಬರಿಗೆ, ಆಂಧ್ರಪ್ರದೇಶದಿಂದ ಮೂವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ.
ಈ ಬಾರಿ ಮಂತ್ರಿ ಮಂಡಲದಲ್ಲಿ 13 ಸಚಿವರಿಗೆ ಅವಕಾಶ ಕಲ್ಪಿಸಲಾಗಿದೆ.
ದಕ್ಷಿಣದ ಐದು ರಾಜ್ಯಗಳಿಂದ 30 ಲೋಕಸಭೆ ಕ್ಷೇತ್ರಗಳನ್ನ ಜಯಿಸಿದ್ದ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟ ಮೋದಿ 3.0 ಸಂಪುಟದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ್, ತೆಲಂಗಾಣ ರಾಜ್ಯಗಳಿಗೆ ಸೂಕ್ತ ಪ್ರಾತಿನಿಧ್ಯ ಲಭಿಸಿದ್ದು ಒಟ್ಟು 13 ಸಚಿವರು ಸ್ಥಾನ ಪಡೆದಿದ್ದಾರೆ.
ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್ ಹಾಗೂ ಪ್ರಹ್ಲಾದ ಜೋಶಿ ಸ್ಥಾನ ಪಡೆದಿದ್ದಾರೆ.
Narendra Modi ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಬಿಜೆಪಿ ಮತ ಪ್ರಮಾಣ 2019ರ ಚುನಾವಣೆಗಿಂತ ಹೆಚ್ಚಿದೆ. ಹೀಗಾಗಿ 2026ರ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿಗೆ ಪಕ್ಷವನ್ನ ಬಲಿಷ್ಠ ಗೊಳಿಸುವುದು ಬಿಜೆಪಿ ವರಿಷ್ಠರ ಗುರಿಯನ್ನು ವಿಶ್ಲೇಷಿಸಲಾಗಿದೆ.