Sunday, December 14, 2025
Sunday, December 14, 2025

Kimmane Ratnakar ಸಮಾಜದ ಪರಿಸ್ಥಿತಿ ಸರಿಪಡಿಸುವ ಹೊಣೆ ಶಿಕ್ಷಕರ ಮೇಲಿದೆ- ಕಿಮ್ಮನೆ ರತ್ನಾಕರ್

Date:

Kimmane Ratnakar ಇವತ್ತಿನ ವಾಸ್ತವ ಸಮಾಜದ ಪರಿಸ್ಥಿತಿ ಸರಿಪಡಿಸುವ ಗುರತರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಈಸೂರು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ಪ್ರವೀಣ್ ಮಹಿಷಿ ಅವರ ಸ್ನೇಹ ಬಳಗ ಹೊರತಂದ ಅಮೃತಬಳ್ಳಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜ ಹೆಚ್ಚು ಹಾಳಾಗುತ್ತಿರುವುದು ವಿದ್ಯಾವಂತರಿಂದಲೇ. ಶಿಕ್ಷಣ ಪಡೆದವರಿಂದಲೇ ಜಾಸ್ತಿ ತಪ್ಪುಗಳು, ಅನಾಹುತಗಳು ಆಗುತ್ತಿರುವ ಈ ಸಂದರ್ಭದಲ್ಲಿ ಸಮಾಜವನ್ನು ಸುಸ್ಥಿತಿಗೆ ತರುವ
ಹೊಣೆ ಶಿಕ್ಷಕರ ಮೇಲೆ ಹೆಚ್ಚಾಗಿದೆ ಎಂದರು.

ನಾವು ಇಂದು ಹೆಚ್ಚಾಗಿ ದೂರುತ್ತಿರುವುದು ದುಡಿವ ವರ್ಗದವರನ್ನು. ಆದರೆ, ಸಮಾಜ ಹಾಳಾಗುತ್ತಿರುವುದು ದುಡಿವ ವರ್ಗದ ಜನರಿಂದ ಅಲ್ಲ, ವಿದ್ಯಾವಂತರಿಂದ ಎಂಬುದನ್ನು ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ನಾವು ನೋಡಿದ್ದೇವೆ. ಈ ಸಂದರ್ಭದಲ್ಲಿ ಆಗುತ್ತಿರುವ ಲೋಪಗಳನ್ನು ಯಾರು, ಯಾವಾಗ ಸರಿಪಡಿಸಬೇಕು ಎಂದು ಪ್ರಶ್ನಿಸಿದ ಅವರು, ಶಿಕ್ಷಣ ಪಡೆದವರು ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕು ಎಂದರು. ಶಿಕ್ಷಣ ಸಮಾಜಕ್ಕೇ ಏನಾದರೂ ಕೊಡುತ್ತಿದೆಯಾ?
ಸಮಾಜಕ್ಕೆ ಏನಾದ್ರೂ ಲಾಭ ಆಗ್ತಿದೆಯಾ? ನಾನು ಪಡೆದ ಶಿಕ್ಷಣ ನನಗೆ, ನನ್ನ ಹಾಗೂ ನನ್ನ ಕುಟುಂಬಕ್ಕೆ ಮಾತ್ರ ಲಾಭ ಆಗ್ತಾ ಇದೆ ಅನ್ನೋದಾದ್ರೆ, ಇಂಥ ಶಿಕ್ಷಣದಿಂದ ಯಾವುದೇ ಲಾಭ ಇಲ್ಲ.

ಸಮಾಜಮುಖಿ ಆಗದ ಶಿಕ್ಷಣದಿಂದ ಐದು ಪೈಸೆ ಲಾಭ ಇಲ್ಲ ಎಂದು ಅವರು ವಿಶ್ಲೇಷಿಸಿದರು. ಶಿಕ್ಷಣದಿಂದ ಸಮಾಜಕ್ಕೆ ಒಳ್ಳೆಯದಾಗಬೇಕು. ಶಿಕ್ಷಣದಿಂದ ಮಾತ್ರ ಒಳ್ಳೆಯರಾಗ್ತಿವಿ ಅನ್ನೋರಿಗೆ ಬದ್ಧತೆ ಬೇಕು. ಈ ಪ್ರಪಂಚವನ್ನು, ಸಮಾಜವನ್ನು ಸರಿದಾರಿಯಲ್ಲಿ ಕಟ್ಟಬೇಕು ಎಂಬ ಉದ್ದೇಶ ಹೊಂದಿರುವ ಶಿಕ್ಷಕರು
ಕ್ರಿಯಾಶೀಲರಾಗಲು ಇದು ಸುಸಮಯ.

Kimmane Ratnakar ದಿನೇದಿನೇ ಭಾರೀ ಅವ್ಯವಸ್ಥೆಯತ್ತ ಸಾಗುತ್ತಿರುವ ಸಮಾಜವನ್ನು ಸುಸ್ಥಿತಿಗೆ ತರುವ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕಿದೆ ಎಂದು ಕರೆ ನೀಡಿದರು. ಅಮೃತಬಳ್ಳಿ’
ಪುಸ್ತಕವನ್ನು ಬೆಂಗಳೂರಿನ ನಿವೃತ್ತ ಪ್ರಾಚಾರ್ಯರಾದ ಅನುರಾಧ ಬಿಡುಗಡೆ ಮಾಡಿದರು.

ಪ್ರವೀಣ್ ಮಹಿಷಿ, ಶೀಲಾ ಮಹಿಷಿ, ಉಪನ್ಯಾಸಕರಾದ ಡಾ. ಸಾಸ್ವೇಹಳ್ಳಿ ಸತೀಶ್, ಗೋಪಾಲಗೌಡ, ರವಿಕುಮಾರ್, ಅನಿತಾ ಜವಳಿ, ಗೋಪಾಲಕೃಷ್ಣ, ಶ್ವೇತಾ, ಶಿಲ್ಪಾ, ಶೃತಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...