Friday, June 19, 2026
Friday, June 19, 2026

Canara Bank Self Employment Training Institute ಶಿವಮೊಗ್ಗ ಸಂಪದ್ಭರಿತ ಜಿಲ್ಲೆ. ಸ್ವ ಉದ್ಯೋಗಕ್ಕೆ ಅವಕಾಶಗಳಿವೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Canara Bank Self Employment Training Institute ಶಿವಮೊಗ್ಗ ಜಿಲ್ಲೆಯು ಸಂಪತ್ಭರಿತಾ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲ ಶಿವಯೋಗಿ ಯೆಲಿ, ಉಪ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಡೋಮೈನ್ ಸ್ಕೀಲ್ ಟ್ರೈನರ್ ಅದಂತಹ ಕತ್‍ಮುನಿಸಾ ಮತ್ತು ದೀಪಾರವರು ಹಾಜರಿದ್ದರು. ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸುವ ಜೊತೆಗೆ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಟ್ಟರು.

Canara Bank Self Employment Training Institute ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...