Saturday, June 21, 2025
Saturday, June 21, 2025

Canara Bank Self Employment Training Institute ಶಿವಮೊಗ್ಗ ಸಂಪದ್ಭರಿತ ಜಿಲ್ಲೆ. ಸ್ವ ಉದ್ಯೋಗಕ್ಕೆ ಅವಕಾಶಗಳಿವೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Canara Bank Self Employment Training Institute ಶಿವಮೊಗ್ಗ ಜಿಲ್ಲೆಯು ಸಂಪತ್ಭರಿತಾ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲ ಶಿವಯೋಗಿ ಯೆಲಿ, ಉಪ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಡೋಮೈನ್ ಸ್ಕೀಲ್ ಟ್ರೈನರ್ ಅದಂತಹ ಕತ್‍ಮುನಿಸಾ ಮತ್ತು ದೀಪಾರವರು ಹಾಜರಿದ್ದರು. ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸುವ ಜೊತೆಗೆ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಟ್ಟರು.

Canara Bank Self Employment Training Institute ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...