Friday, June 13, 2025
Friday, June 13, 2025

Renukaswamy Chitradurga ರೇಣುಕಾಸ್ವಾಮಿ ಬರ್ಬರ ಹತ್ಯೆ: ಜಿಲ್ಲಾ ಜಂಗಮ ಸಮಾಜದಿಂದ‌ ಖಂಡನೆ

Date:

Renukaswamy Chitradurga ಜಂಗಮ ಸಮಾಜದ ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಚಲನಚಿತ್ರನಟ ದರ್ಶನ್ ಅಭಿಮಾನಿಬಳಗದ ಸದಸ್ಯರ ಮುಖಾಂತರ ಬೆಂಗಳೂರಿಗೆ ಕರೆಸಿ ಚಿತ್ರಹಿಂಸೆ ನೀಡಿ ನರಳಿ ನರಳಿ ಸಾಯುವಂತೆ ಮಾಡಿರುವ ಘಟನೆಯನ್ನು ಜಿಲ್ಲಾ ಜಂಗಮ ಸಮಾಜ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಾಜದ ಮುಖಂಡರು, ರೇಣುಕಾ ಸ್ವಾಮಿಗೆ ತನ್ನ ಅಭಿಮಾನಿಗಳ ಮೂಲಕ ವಿವಿಧ ಆಯುಧಗಳಿಂದ ಅವರ ದೇಹದ ಅಂಗಗಳು ಊನಆಗುವಂತೆ ಹೊಡೆದು ಸಾಯಿಸಿರುವುದು ರಾಕ್ಷಸ ಪ್ರವೃತ್ತಿಯಾಗಿದೆ.

ಸಮಾಜಕ್ಕೆ ಚಲನಚಿತ್ರದ ಮೂಲಕ ನೀತಿ ಪಾತ್ರಗಳು ನೀತಿಪಾತ್ರಗಳನ್ನು ನಿರ್ವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಇಂತಹ ಗೋಮುಖ ವ್ಯಾಘ್ರತನದ ನಟರು ಮಾಡಿರುವ ಕೃತ್ಯವನ್ನು ಕರ್ನಾಟಕದ ಎಲ್ಲ ಜಂಗಮ ಬಂಧುಗಳು ಖಂಡಿಸುತ್ತಾರೆ ಎಂದಿದ್ದಾರೆ.

Renukaswamy Chitradurga ಚಿತ್ರಹಿಂಸೆ ನೀಡಿರುವ ಇವರಿಗೆ ಮರಣದಂಡನೆಯನ್ನು ವಿಧಿಸಿದರೂ ಶಿಕ್ಷೆ ಕಡಿಮೆಯೇ. ಅವರಿಗೂ ಅವರೊಡನೆ ಚಿತ್ರಹಿಂಸೆ ನೀಡಲು ಸಹಕರಿಸಿದ ಎಲ್ಲರಿಗೂ ಘೋರಶಿಕ್ಷೆ ವಿಧಿಸುವಂತೆ ಸಮಾಜದ ಮುಖಂಡರು ಆಗ್ರಹಿಸಿದ್ದಾರಲ್ಲದೆ, ಅವರ ಕೃತ್ಯವನ್ನು ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...