Sunday, December 14, 2025
Sunday, December 14, 2025

Agumbe Police ಪೋಷಕರು ಮತ್ತು ಇತರರಿಗೂ ವಿದ್ಯಾರ್ಥಿಗಳು ರಸ್ತೆ ಸುರಕ್ಷಾ ನಿಯಮ ಪಾಲಿಸಲು ತಿಳಿಸಬೇಕು- ರಂಗನಾಥ್ ಅಂತರಘಟ್ಟಿ

Date:

Agumbe Police ವಿಧ್ಯಾರ್ಥಿಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ಮತ್ತು ನಿಮ್ಮ ಪೋಷಕರು ಹಾಗೂ ಪರಿಚಯದವರಿಗೂ ಕೂಡ ರಸ್ತೆ ಸುರಕ್ಷತೆಗಳ ಬಗ್ಗೆ ತಿಳುವಳಿಕೆ ನೀಡಿ ಎಂದು ಪಿಎಸ್ಐ ಶ್ರೀ ರಂಗನಾಥ್ ಅಂತರಘಟ್ಟಿ ಅವರು ಸಲಹೆ ನೀಡಿದರು.

ಆಗುಂಬೆ ಠಾಣಾ ವ್ಯಾಪ್ತಿಯ ಕಡತೂರು ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನೀವು ಶಾಲೆಗೆ ಬರುವ ಸಮಯದಲ್ಲಿ ಮತ್ತು ಶಾಲೆಯಿಂದ ಹೋಗುವ ವೇಳೆ ರಸ್ತೆಯ ಎರಡೂ ಬದಿಯಲ್ಲಿ ನೋಡಿ ವಾಹನಗಳು ಇಲ್ಲೆದೇ ಇರುವುದನ್ನು ಖಾತರಿ ಪಡಿಸಿಕೊಂಡು ನಂತರವೇ ರಸ್ತೆ ದಾಟಿ, ಯಾವುದೇ ಗಡಿಬಿಡಿಯಿಂದ ರಸ್ತೆ ದಾಟುವುದು ಬೇಡ ಎಂದರು.

ಪೋಕ್ಸೋ ಕಾಯ್ದೆ, ಬಾಲ ವಿವಾಹ ನಿಷೇದ ಕಾಯ್ದೆ, ಬಾಲಕಾರ್ಮಿಕ ನಿಷೇದ ಕಾಯ್ದೆಗಳ ಮಾಹಿತಿ ನೀಡಿದ್ದು, ಯಾವುದೇ ತುರ್ತು ಸಂದರ್ಭದಲ್ಲಿ 112 ತುರ್ತು ಸಹಾಯವಾಣಿ ಅಥವಾ ಪೊಲೀಸ್ ಇಲಾಖೆಗೆ ಸಂಪರ್ಕಿಸಿ ಎಂದು ಸೂಚಿಸಿದರು.

Agumbe Police ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಫೊನ್ ಬಳಸುವಾಗ ಎಚ್ಚರಿಕೆಯಿಂದ ಬಳಕೆ ಮಾಡಿ, ಯಾರೇ ಆಗಲಿ ಫೋನ್ ಮುಖಾಂತರ OTP, ATM PIN ನಂಬರ್, CVV ನಂಬರ್ ಕೇಳಿದಾಗ ನೀಡಬೇಡಿ, ಒಂದು ವೇಳೆ ನೀವು ಈ ಎಲ್ಲಾ ಮಾಹಿತಿಗಳನ್ನು ನೀಡಿದಾಗ ಸೈಬರ್ ವಂಚಕರು ನಿಮ್ಮನ್ನು ಮೋಸದ ಬಲೆಗೆ ಸುಲಭವಾಗಿ ಸೆಳೆಯುತ್ತಾರೆಂದು ತಿಳಿಸಿದರು.

ಈ ಸಂದರ್ಭದಲ್ಲಿ, ಶ್ರೀ ಮಾರುತಿ, ಮುಖ್ಯೋಪಾಧ್ಯಾಯರು, ಕಡತೂರು ಪ್ರೌಢ ಶಾಲೆ, ಶಿಕ್ಷಕರು, ಮತ್ತು ವಿಧ್ಯಾರ್ಥಿಗಳು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...