Thursday, June 18, 2026
Thursday, June 18, 2026

Actor Darshan ಕೊಲೆ ಕೇಸಿನ ಸಂಬಂಧ ನಟ ದರ್ಶನ್ ಅರೆಸ್ಟ್

Date:

Actor Darshan ನಟ ದರ್ಶನ್ ಮದುವೆಯಾಗಿದ್ದಾರೆ ಎನ್ನಲಾದ ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿದ್ದ ಎಂದು ಆರೋಪಿಸಿ ಚಿತ್ರದುರ್ಗ ಮೂಲದ ಯುವಕನನ್ನು ಕೊಲೆ ಮಾಡಲಾಗಿದ್ದು, ದರ್ಶನ್ ಮತ್ತು ಅವರ 10 ಜನ ಸಹಚರರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಇಂದು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ನಟಿ ಪವಿತ್ರಾ ಗೌಡ ಅವರನ್ನು ದರ್ಶನ್ ಮದುವೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇಬ್ಬರ ಫೋಟೋಗಳು ಜಾಲತಾಣದಲ್ಲಿ ಹರಿದಾಡಿದ್ದವು.

ಪವಿತ್ರಾ ಗೌಡ ಅವರಿಗೆ ಸ್ವಾಮಿ ಕೆಟ್ಟದಾಗಿ ಮೆಸೆಜ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಕೋಪಗೊಂಡಿದ್ದ ದರ್ಶನ್ ತಮ್ಮ ಬೆಂಬಲಿಗರನ್ನು ಕಳುಹಿಸಿ ಥಳಿಸಿದ್ದರು ಎನ್ನಲಾಗಿದೆ.
ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ.

ಜೂನ್ 8ರಂದು ಆತನನ್ನು ನಗರದ ಶೆಡ್ ಒಂದರಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಕೊಲೆ ಮಾಡಿದ ಆರೋಪಿಗಳು ತಾವೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ದರ್ಶನ್ ಅವರ ಸೂಚನೆ ಮೇರೆಗೆ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

Actor Darshan ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಕೊಲೆಗಾರರ ತಾವು ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಮೊದಲು ಮೂರು ಜನ ಪೊಲೀಸರಿಗೆ ಸರೆಂಡರ್ ಆಗಿದ್ದರು. ನಂತರ ಅವರನ್ನು ವಿಚಾರಣೆ ಮಾಡಿದ ಬಳಿಕ ಇದರಲ್ಲಿ ನಟ ದರ್ಶನ್ ಪಾತ್ರ ಇದೆ ಎಂಬುದು ಗೊತ್ತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...