Sunday, December 14, 2025
Sunday, December 14, 2025

Gauri movie ಇಂದ್ರಜಿತ್ ಲಂಕೇಶ್ ನಿರ್ದೇಶನದ ” ಗೌರಿ” ಸಿನಿಮಾ ಮುಂದಿನ ತಿಂಗಳು ತೆರೆಗೆ

Date:

Gauri movie ಗೌರಿ ಚಲನಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಸಿನಿಮಾಕ್ಕೆ ದೊಡ್ಡ ಬಜೆಟ್ ಹೂಡಲಾಗಿದೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದ್ದು, ಐವರು ಸಂಗೀತ ನಿರ್ದೇಶಕರಿದ್ದಾರೆ.

ಕಮರ್ಷಿಯಲ್ ಆದರೂ ಒಳ್ಳೆಯ ಮೆಸೇಜ್ ಇದೆ. ಗೌರಿ ತತ್ವದ ಮೇಲೆ ಸಿನಿಮಾ ಮಾಡುತ್ತಿಲ್ಲ. ಗೌರಿಯ ಕಥೆಯಲ್ಲ. ಆದರೆ ಅಕ್ಕನ ನೆನಪಿಗಾಗಿ ಸಿನಿಮಾ ಮಾಡುತ್ತಿರುವುದಾಗಿಯೂ ಮುಂದಿನ ತಿಂಗಳು ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಹೇಳಿದರು.

ಗೌರಿ ಚಲನ ಚಿತ್ರದ ಪ್ರಮೋಷನ್‌ಗಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಲಂಕೇಶ್ ಅವರ ಮೊಮ್ಮಗ, ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ನಾಯಕಿಯಾಗಿ ಸಾನಿಯಾ ಅಯ್ಯರ್ ಅಭಿನಯಿಸಿದ್ದಾರೆ. ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಥಿಯೇಟರ್ ಸ್ಟಡಿಸ್ ಮಾಡಿದ್ದಾರೆ. ಇಬ್ಬರು ಕನ್ನಡ ಪ್ರತಿಭೆಗಳಿದ್ದಾರೆ.

ಪ್ರಿಯಾಂಕ ಉಪೇಂದ್ರ, ಲೂಸ್ ಮಾದ, ನೀನಾಸಂ ಸುಧೀರ್, ಅಕುಲ್ ಬಾಲಾಜಿ, ಚಂದು ಗೌಡ ಮೊದಲಾದ ಕಲಾವಿದರು ಅಭಿನಯಿಸಿದ್ದಾರೆ ಎಂದರು.
ಮುಂದಿನ ತಿಂಗಳು ಸಿನಿಮಾ ಬಿಡುಗಡೆಯಾಗಲಿದೆ. ಅಕ್ಕ ಗೌರಿಯ ನೆನಪಿಗಾಗಿ ಸಿನಿಮಾಕ್ಕೆ ಅದೇ ಹೆಸರು ಇಡಲಾಗಿದೆ.

ಗೌರಿಯ ನೆನಪಿಗಾಗಿ ಆರಂಭಿಸಲಾಗಿದೆ ವಿನಃ ಇದು ಗೌರಿ ಸಿದ್ದಾಂತದ ಸಿನಿಮಾ ಅಲ್ಲ. ಕನ್ನಡಕ್ಕೆ ಸೀಮಿತವಾಗಿದೆ. ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಯುವಕರ ಮೇಲೆ ಒತ್ತಡ ಹಾಕಬಾರದು ಎಂಬ ಕಾರಣಕ್ಕೆ ಕನ್ನಡಕ್ಕೆ ಸೀಮಿತವಿಡಲಾಗಿದೆ ಎಂದರು.

ನೈಜ ಘಟನೆಯ ಸಿನಿಮಾ ಇದಾಗಿದೆ. ಸಿನಿಮಾ ಕಥೆಯ ವಿಷಯದಲ್ಲಿ ಗೆದ್ದಿದ್ದೇನಿ ಮತ್ತು ಸೋತಿದ್ದೇನೆ. ಆದರೆ ಗುಣಮಟ್ಟದಲ್ಲಿ ಸೋತಿಲ್ಲ. ನಮಗೆ ವಿದೇಶದಲ್ಲಿ ಶೂಟಿಂಗ್ ಗೆ ಆಗುವ ಖರ್ಚಿನಲ್ಲಿ ರಾಜ್ಯದಲ್ಲಿ ಎರಡು ಶೂಟಿಂಗ್ ಮಾಡಬಹುದು. ಹಾಗಾಗಿ ವಿದೇಶದಲ್ಲಿ ಶೂಟಿಂಗ್ ಮಾಡಿಲ್ಲ. ಕಥೆಗೆ ವಿದೇಶಕ್ಕೆ ಹೋಗಿದ್ದರೂ ಶೂಟಿಂಗ್ ನ ಅವಶ್ಯಕತೆ ಇರಲಿಲ್ಲವೆಂದರು.

Gauri movie ಸಮರ್ಜಿತ್ ಲಂಕೇಶ್ ಮಾತನಾಡಿ, ಚಿಕ್ಕ ವಯಸ್ಸಿನಿಂದ ಸಿನಿಮಾ ಇಂಡಸ್ಟ್ರೀಸ್ ಹೆಚ್ಚು ಪ್ರೀತಿ. ಸುದೀಪ್ ಮತ್ತು ನನ್ನ ತಂದೆಯ ಸಿನಿಮಾಗಳ ಪ್ರೇರಣೆ. ಯೋಗರಾಜ್ ಭಟ್ ರವರ ಗರಡಿ ಮತ್ತು ಕರಟಕಧಮನಕ ಸಿನಿಮಾದಲ್ಲಿ ಅಸಿಸ್ಟೆಂಟ್ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಅಸಿಸ್ಟೆಂಟ್ ನೃತ್ಯ ನಿರ್ದೇಶಕರಾಗಿದ್ದೇನೆ. ಪಲ್ಲವಿ ಮತ್ತು ಎಲ್ಲಿಂದಲೋ ಬಂದವರು ಸಿನಿಮಾವನ್ನು ಅತ್ತೆ ಜೊತೆ ನೋಡಿದ್ದ ನೆನಪನ್ನು ಮೆಲುಕು ಹಾಕಿದ ನವ ನಾಯಕ, ಅಪ್ಪು ಸಾರ್ ಮತ್ತು ಸುದೀಪ್ ನನಗೆ ಸ್ಫೂರ್ತಿ ಎಂದರು.

ಸಾನಿಯಾ ಅಯ್ಯರ್ ಮಾತನಾಡಿ, ಸಿನಿಮಾದಲ್ಲಿ ಹೊಸಬರಿಗೆ ಅವಕಾಶ ನೀಡಿರುವುದು ಖುಷಿಯಾಗಿದೆ. ಸಮರ್ಜಿತ್ ಇಡೀ ತಂಡದಲ್ಲಿ ಕೆಲಸ ಮಾಡುವಾಗ ಕುಟುಂಬಸ್ಥಳು ಎಂಬಂತೆ ಟ್ರೀಟ್ ಸಿಕ್ಕಿದೆ. ಸಮರ್ಜಿತ್ ನೋಡಿದಾಗ ಅಪ್ಪು ಸಾರ್ ನೆನಪಾಗುತ್ತದೆ. ಪಾತ್ರಕ್ಕಾಗಿ ಕಲಿಯಬೇಕಾದ ಅಂಶ ಸಿನಿಮಾದಲ್ಲಿದೆ. ಇಂದ್ರಜಿತ್ ಸಾರ್ ಇಲ್ಲವಾದರೆ ನನ್ನ ಕನಸು ಚಿಗುರು ಒಡೆಯುತ್ತಿರಲಿಲ್ಲ. ನಾನು ಧಾರಾವಾಹಿಯಿಂದ ನನ್ನ ಪ್ರಯಾಣ ಆರಂಭಿಸಿದೆ ಸಿನಿಮಾದಲ್ಲಿ ತೆರೆದುಕೊಳ್ಳಲು ಅವಕಾಶ ಸಿಕ್ಕಿದೆ ಎಂದು ಬಣ್ಣಿಸಿದ ಅವರು ತಾವೇ ಬರೆದ ಕಾವ್ಯವನ್ನೂ ಹೇಳಿದ್ದು ಗಮನಾರ್ಹವಾಗಿತ್ತು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...