Monday, December 15, 2025
Monday, December 15, 2025

Kuwait Fire Tragedy ಕುವೈತ್ ನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ. ಭಾರತೀಯರೂ ಸೇರಿದಂತೆ 41ಮಂದಿ ದಹನ

Date:

Kuwait Fire Tragedy ಕುವೈತ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯರು ಸೇರಿ 41 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಸುಮಾರು 160 ಜನರು ವಾಸಿಸುತ್ತಿದ್ದರು ಮತ್ತು ಅದೇ ಕಂಪೆನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಕಟ್ಟಡದಲ್ಲಿ ತಂಗಿದ್ದ ಹೆಚ್ಚಿನ ಕಾರ್ಮಿಕರು ಭಾರತೀಯರು ಎಂದು ವರದಿಯಾಗಿದೆ.
ಕಾರ್ಮಿಕರೆಲ್ಲ ಕೇರಳ, ತಮಿಳುನಾಡು ಮತ್ತು ಉತ್ತರ ಭಾರತದವರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

ಕೇರಳದ ಉದ್ಯಮಿ ಕೆ ಜಿ ಅಬ್ರಹಾಂ ಅವರ ಎನ್‌ಬಿಟಿಸಿ ಗ್ರೂಪ್‌ ಒಡೆತನದ ಕಟ್ಟಡ ಇದೆಂದು ಹೇಳಲಾಗಿದ್ದು, ಎನ್‌ಬಿಟಿಸಿ ಸೂಪರ್‌ಮಾರ್ಕೆಟ್‌ ಉದ್ಯೋಗಿಗಳೂ ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದರೆನ್ನಲಾಗಿದೆ.

ಅವಘಡದ ಬೆನ್ನಲ್ಲಿ ಭಾರತೀಯ ಕಾರ್ಮಿಕರನ್ನು ಒಳಗೊಂಡ ದುರಂತ ಬೆಂಕಿ-ಅಪಘಾತಕ್ಕೆ ಸಂಬಂಧಿಸಿದಂತೆ ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ +965-65505246ನ್ನು ನೀಡಿದ್ದು, ತುರ್ತು ಅವಶ್ಯಕತೆ ಇದ್ದಲ್ಲಿ ಸಂಪರ್ಕಿಸಲು ಸೂಚಿಸಿದೆ.

ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ರಾಯಭಾರ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

Kuwait Fire Tragedy ಕುವೈತ್ ನಗರದಲ್ಲಿ ಬೆಂಕಿ ಅವಘಡದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ರಾಯಭಾರಿ ಸ್ಥಳಕ್ಕೆ ಹೋಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ನಮ್ಮ ರಾಯಭಾರ ಕಚೇರಿಯು ಸಂಪೂರ್ಣ ಸಹಾಯವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...