Thursday, June 18, 2026
Thursday, June 18, 2026

Supreme Court ‘ಹಮಾರೆ ಬಾರಹ್’ಸಿನಿಮಾ ಬಿಡುಗಡೆಗೆ ಸುಪ್ರೀಂ ಮಧ್ಯಂತರ ತಡೆಯಾಜ್ಞೆ

Date:

Supreme Court ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪ ಹೊತ್ತಿರುವ ಹಿಂದಿ ಚಿತ್ರ ‘ಹಮಾರೆ ಬಾರಹ್‌’ ನ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ಸೂಚಿಸಿದೆ.

ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ : ಜೂನ್‌ 7ರಂದು ಹಮಾರೆ ಬಾರಹ್ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಚಿತ್ರಕ್ಕೆ ನೀಡಲಾದ ಸೆನ್ಸಾರ್ ಸರ್ಟಿಫಿಕೇಟ್ ಹಿಂಪಡೆಯಬೇಕು ಮತ್ತು ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಅಝರ್ ಬಾಷಾ ತಂಬೋಲಿ ಎಂಬವರು ಬಾಂಬೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಚಿತ್ರವು ಸಿನಿಮಾಟೋಗ್ರಾಫ್ ಕಾಯ್ದೆ-1952ರ ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಚಿತ್ರದ ಟ್ರೇಲರ್ ಭಾರತೀಯ ಮುಸ್ಲಿಮರ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳಿಸುವಂತಿದೆ. ಈ ಚಿತ್ರದ ಬಿಡುಗಡೆ ಸಂವಿಧಾನದ 19(2) ಮತ್ತು 25 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಚಿತ್ರದ ಟ್ರೇಲರ್ ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸ್ವತಂತ್ರ ಹಕ್ಕುಗಳಿಲ್ಲ ಎಂದು ಚಿತ್ರಿಸಿದೆ. ಕುರಾನ್‌ನ 223ನೇ ಆಯತ್ ಅನ್ನು ತಪ್ಪಾಗಿ ವಿವರಿಸಿದೆ. ಚಿತ್ರದ ಬಿಡುಗಡೆಗೆ ಮುನ್ನ ಮಾರ್ಪಾಡುಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದ್ದರೂ, ಟ್ರೇಲರ್ ಯಾವುದೇ ಡಿಸ್ಕ್ಲೈಮರ್ ಅಥವಾ ಸಿಬಿಎಫ್‌ಸಿ ನೀಡಿದ ಸರ್ಟಿಫಿಕೇಟ್‌ನ್ನು ಉಲ್ಲೇಖಿಸಿಲ್ಲ ಎಂದಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಸಿಬಿಎಫ್‌ಸಿ, “ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಚಿತ್ರಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಅಳಿಸಲಾಗಿದೆ. ಯೂಟ್ಯೂಬ್ ಮತ್ತು ಬುಕ್‌ಮೈಶೋನಲ್ಲಿ ಬಿಡುಗಡೆಯಾದ ಚಿತ್ರದ ಟ್ರೇಲರ್‌ಗಳು ಪ್ರಮಾಣೀಕೃತ ಟ್ರೇಲರ್‌ಗಳಲ್ಲ ಎಂದು ಹೇಳಿತ್ತು.

Supreme Court ವಾದ-ಪ್ರತಿವಾದ ಆಲಿಸಿದ್ದ ಬಾಂಬೆ ಹೈಕೋರ್ಟ್‌ ಜೂನ್ 14ರವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಚಿತ್ರ ವೀಕ್ಷಿಸಿ ವರದಿ ನೀಡಲು ಮೂವರು ಸದಸ್ಯರ ಸಮಿತಿ ರಚಿಸಿತ್ತು. ಆದರೆ, ಈ ಸಮಿತಿ ಕಾಲ ಮಿತಿಯೊಳಗೆ ವರದಿ ನೀಡದೆ ಹೆಚ್ಚಿನ ಕಾಲವಕಾಶ ಕೋರಿತ್ತು. ಹಾಗಾಗಿ, ಹೈಕೋರ್ಟ್ ಜೂನ್ 14ರಂದು ಚಿತ್ರ ಬಿಡುಗಡೆಗೆ ಅವಕಾಶ ನೀಡಿತ್ತು. ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಆಕ್ಷೇಪಾರ್ಹ ಅಂಶಗಳನ್ನು ತೆಗದು ಹಾಕುವಂತೆ ಸೂಚಿಸಿತ್ತು.

ಚಿತ್ರ ಬಿಡುಗಡೆಗೆ ಅನುಮತಿ ನೀಡಿರುವ ಮತ್ತು ಸಿಬಿಎಫ್‌ಸಿಯಿಂದ ಸಮಿತಿ ರಚನೆಗೆ ನಿರ್ದೇಶನ ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿದಾರ ಅಝರ್ ಬಾಷಾ ತಂಬೋಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬಾಂಬೆ ಹೈಕೋರ್ಟ್ ಪ್ರಕರಣ ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...