Sunday, December 14, 2025
Sunday, December 14, 2025

Times Spirit International School ವಿಘ್ನೇಶ್ವರ ಪೂಜೆಯೊಂದಿಗೆ ವಿದ್ಯಾರಂಭ ನಮ್ಮ ಸಂಸ್ಕೃತಿ- ಗಂಗಾಧರ್

Date:

Times Spirit International School ಭದ್ರಾವತಿ ನಗರದ ಹೊಸ ಸಿದ್ದಾಪುರ ಬೈಪಾಸ್ ಬಿ.ಹೆಚ್.ರಸ್ತೆಯಲ್ಲಿರುವ ಟೈಮ್ಸ್ ಸ್ಪೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಪುಟ್ಟ ಕಂದಮ್ಮಗಳಿಗೆ ವಿದ್ಯಾರಂಭ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಕಂದಮ್ಮಗಳಿಗೆ ಕಲಿಕೆ, ಬುದ್ದಿ ಬೆಳವಣಿಗೆ, ಜ್ಞಾನೋದಯ ತುಂಬಿಸುವ ಹೊಸ ಶೈಕ್ಷಣಿಕಾರಂಭಕ್ಕೆ ಸ್ಪೂರ್ತಿಯಾಯಿತು. ಪುಟ್ಟ ಮಗು ಜಗತ್ತಿಗೆ ಕಣ್ಣು ಬಿಟ್ಟ ಕ್ಷಣದಿಂದಲೇ ಅದರ ಕಲಿಕೆ ಪ್ರಾರಂಭವಾಗುತ್ತದೆ. ನಗುವುದು, ಕೂರುವುದು, ನಿಲ್ಲುವುದು, ಚಪ್ಪಾಳೆ ತಟ್ಟುವುದು, ತೊದಲು ಮಾತು ಆರಂಭ ಎಲ್ಲವೂ ಮಗುವಿನ ಕಲಿಕೆಯೇ ಆಗಿರುತ್ತದೆ. ಇದರ ಜೊತೆಗೆ ದೊಡ್ಡವರನ್ನು ನೋಡಿ ಕಲಿಯುತ್ತಲೇ ಇರುತ್ತದೆ. ಇಷ್ಟೆಲ್ಲಾ ಆಗಿ ಮಗು ಶಾಲೆ ಎಂಬ ಜ್ಞಾನಾರ್ಜನೆಯ ಹಾದಿಗೆ ಹೆಜ್ಜೆ ಇಡುವ ಶುಭ ಗಳಿಗೆಯಲ್ಲಿ ಸರಸ್ವತಿ ದೇವಿಯ ಆರಾಧನೆ ಮತ್ತು ವಿಘ್ನೇಶ್ವರ ಸ್ವಾಮಿಯ ಪೂಜೆಯೊಂದಿಗೆ ವಿದ್ಯಾರಂಭ ಮಾಡುವುದು ನಮ್ಮೆಲ್ಲರ ಸಂಸ್ಕೃತಿಯಾಗಿದೆ ಎಂದು ಗಂಗಾಧರ್ ಹೇಳಿದರು.
Times Spirit International School ಪ್ರಾಂಶುಪಾಲ ಕೆ.ಚೇತನ್ ಸರಸ್ವತಿ ದೇವಿಯ ಆರಾಧನೆಯೊಂದಿಗೆ ಹಾಗೂ ಗುರುಗಳ ಮಾರ್ಗದರ್ಶನದೊಂದಿಗೆ ಪೋಷಕರು ತಮ್ಮ ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ಓಂ ನಮೋ ಎಂದು ಬರೆಸಲಾಯಿತು. ನಂತರ ಶಿಕ್ಷಕರು ಮಕ್ಕಳಿಗೆ ಕಂಕಣ ಕಟ್ಟುವ ಮೂಲಕ ಅವರ ಕಲಿಕೆಯ ಜವಾಬ್ದಾರಿ ವಹಿಸಿಕೊಂಡರು. ಗುರುಗಳು ಮಕ್ಕಳಿಗೆ ಕಲಿಕೆಯ ವಸ್ತುಗಳನ್ನು ನೀಡುವುದರ ಮೂಲಕ ಆಶೀರ್ವಧಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕಿ ಮಮತಾ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ಸಿಬ್ಬಂದಿ ನೂರಾರು ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...