Sunday, December 14, 2025
Sunday, December 14, 2025

University of Agriculture and Horticulture ಮಲೆನಾಡಿನ ಅಪರೂಪದ ಹಲಸು ತಳಿಗಳಿಗೆ ಪ್ರಾಧಿಕಾರದಿಂದ ಮಾನ್ಯತೆ- ಪ್ರೊ.ಎಂ.ಬಿ.ದುಶ್ಯಂತ್ ಕುಮಾರ್

Date:

University of Agriculture and Horticulture ಮಲೆನಾಡಿನ ವಿಶಿಷ್ಟ ಹಲಸಿನ ತಳಿಗಳಾದ ಹಳದಿ ರುದ್ರಾಕ್ಷಿ-ಜೆ.ಎ.ಆರ್., ಆರೆಂಜ್-ಆರ್.ಪಿ.ಎನ್., ಕೆಂಪು ರುದ್ರಾಕ್ಷಿ-ಡಿ.ಎಸ್.ವಿ ಮತ್ತು ರೆಡ್-ಆರ್.ಟಿ.ಬಿ. ತಳಿಗಳಿಗೆ ನವದೆಹಲಿ ಭಾರತ ಸರ್ಕಾರದ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಣಿಗೊಂಡು ಮಾನ್ಯತೆ ಪಡೆದಿವೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಪ್ರೊ. ಎಂ.ಬಿ. ದುಶ್ಯಂತಕುಮಾರ್ ಹೇಳಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಳಿವಿನಂಚಿನಲ್ಲಿರುವ ಅಪರೂಪದ ಹಲಸಿನ ತಳಿಗಳನ್ನು ಸಂರಕ್ಷಿಸಿ, ಬೆಳೆಸುವ ಹಾಗೂ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿರುವುದನ್ನು ಮನಗಂಡು ಈ ನಾಲ್ಕು ತಳಿಗಳ ಕುರಿತು ಸುಮಾರು 3-4 ವರ್ಷಗಳಿಂದ ಸಮಗ್ರ ಅಧ್ಯಯನ ನಡೆಸಲಾಗಿದೆ

University of Agriculture and Horticulture ಸಂಪೂರ್ಣ ಮಾಹಿತಿಯನ್ನು ನವದೆಹಲಿಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರಕ್ಕೆ ಸಲ್ಲಿಸಲಾಗಿತ್ತು. ಪ್ರಾಧಿಕಾರ ದಿಂದ ನೇಮಕಗೊಂಡ ತಜ್ಞ ವಿಜ್ಞಾನಿಗಳು ೨ಬಾರಿ ಸ್ಥಳ ಪರಿ ಶೀಲನೆ ನಡೆಸಿ, ವಿವರವಾದ ಮಾಹಿತಿಯನ್ನು ಸಂಗ್ರಹಿಸಿ, ಅಂತಿಮವಾಗಿ ನೋಂದಣಿಗೆ ಅರ್ಹವೆಂದು ಶಿಫಾರಸ್ಸು ಮಾಡಿದ್ದ ಹಿನ್ನೆಲೆಯಲ್ಲಿ ನೋಂದಣಿ ಕಾರ್ಯ ಪೂರ್ಣಗೊಂಡು ಪ್ರಮಾಣಪತ್ರ ದೊರಕಿದೆ ಎಂದರು.

ಈ ಅಪರೂಪದ ಸಸ್ಯ ತಳಿಗಳನ್ನು ಪ್ರಸಕ್ತ ಸಾಲಿನಿಂದಲೇ ಅಭಿವೃದ್ಧಿಪಡಿಸಿ, ಆಸಕ್ತ ಕೃಷಿಕರಿಗೆ ತಲುಪಿಸಲು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ವಿಶೇಷ ಗಮನಹರಿಸಲಿದೆ. ಅಲ್ಲದೇ ಅಷ್ಟೇ ಮಿಡಿ ತರಹದ ಅತ್ಯಪರೂಪದ ಮಾವಿನ ವಿಶಿಷ್ಟ ತಳಿಗಳನ್ನೂ ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಿದೆ. ಅಪರೂಪದ ತಳಿ ಇವುಗಳಾಗಿದ್ದು, ಹಲಸು ಬೆಳೆಯುವ ಆಸಕ್ತ ಕೃಷಿಕರಿಂದ ಈ ಹಲಸಿನ ತಳಿ ಉಳಿ ದಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.+++

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...