Tuesday, August 25, 2026
Tuesday, August 25, 2026

Kuvempu University ಯೋಗಾಭ್ಯಾಸದಿಂದ ದೈಹಿಕ,ಮಾನಸಿಕ & ಆಧ್ಯಾತ್ಮಿಕ ಪ್ರಯೋಜನ- ಪ್ರೊ.ಶರತ್ ಅನಂತಮೂರ್ತಿ

Date:

Kuvempu University ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ ಹೀಗಾಗಿ ದಿನನಿತ್ಯ ಯೋಗ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ  ವಿವಿಯ ವಿದ್ಯಾರ್ಥಿಗಳಿಗೆ ಎಂಟು ದಿನಗಳ ಕಾಲ ’ಯೋಗ ಅರಿವು ಕಾರ್ಯಕ್ರಮ’ವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮ ಉದ್ಘಾಟಿಸಿ ಕುಲಪತಿ ಮಾತನಾಡಿದರು.

ಯೋಗಭ್ಯಾಸವನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಅಳವಡಿಸಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳು ಇರುವವೆಂದು ಅವರು ತಿಳಿಸಿದರು.
ಯೋಗಾಭ್ಯಾಸವು ಮಾನಸಿಕ ದೈಹಿಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಆಂತರಿಕ ಶಾಂತಿಯನ್ನು ವೃದ್ಧಿಸುತ್ತದೆ ಹಾಗೂ ನಮ್ಮ ಸಾಮರ್ಥ್ಯಗಳ ಹರಿಯವನ್ನು ತಿಳಿಸಿಕೊಡುತ್ತದೆ ಎಂದು ಹೇಳಿದರು.

Kuvempu University ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಮಂಜುನಾಥ್ ಎ ಎಲ್,  ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್ ಎಸ್ ಎಂ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್ ಡಿ ವಿರೂಪಾಕ್ಷ, ಡಾ. ಎಸ್ ಎಂ ರವೀಂದ್ರ ಗೌಡ ಉಪಸ್ಥಿತರಿದ್ದರು.

ಯೋಗ ಅರಿವು ಕಾರ್ಯಕ್ರಮದಲ್ಲಿ ವಿವಿಯ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...