Monday, December 15, 2025
Monday, December 15, 2025

Joint Director of Agriculture ರೈತರಿಗೆ ಬಿತ್ತನೆಗೆ ಸಮಸ್ಯೆಯಾಗದಂತೆ ಜಿಲ್ಲೆಯಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ- ಜಂಟಿ‌ ಕೃಷಿನಿರ್ದೇಶಕರು

Date:

Joint Director of Agriculture 2024 ರ ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ಸಾಕಷ್ಟು ಪ್ರಾಮಾಣದಲ್ಲಿ ದಾಸ್ತಾನುಗೊಳಿಸಲಾಗಿದೆ ಎಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ತಿಳಿಸಿದ್ದಾರೆ.

ಜಿಲ್ಲೆಯ ರೈತರು ಬೆಳೆಗಳಿಗೆ ಸಮಾನ್ಯವಾಗಿ ಸಾರಜನಕ ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆ ಹೆಚ್ಚಾಗಿದೆ, ಈ ರಸಗೂಬ್ಬರದಲ್ಲಿ ಪೊಟ್ಯಾಷ್ ಅಂಶ ಇರುವುದಿಲ್ಲ. ಪೊಟ್ಯಾಷ್ ಪೋಷಕಾಂಶಗಳು ಬೆಳೆಗಳ ಇಳುವರಿಯು ಹೆಚ್ಚಾಗುವಂತೆ ಮಾಡುತ್ತವೆ. ಈ ಕಾರಣಕ್ಕೆ ರೈತರು ಬಿತ್ತನೆ ಸಮಯದಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಅಂಶಗಳನ್ನು ಹೊಂದಿರುವ ರಸಗೂಬ್ಬರಗಳಾದ 10:26:26, 15:15:15, 12:36:16, 14:35:14, 17:17:17, 14:28:14, 19:19:19, 20:10:10 ಬಳಸುವುದು ಸೂಕ್ತ, ರೈತರು ಬೆಳೆಗಳಿಗೆ ಸಾರಜನಕ ಹೆಚ್ಚು ಬಳಕೆ ಮಾಡುತ್ತಿದ್ದು. ಇದು ಬೆಳೆಗಳಿಗೆ ರೋಗ ಮತ್ತು ಕೀಟ ಭಾದೆಗಳು ಹಚ್ಚು ಆಗುವ ಸಾಧ್ಯತೆ ಇರುವ ಕಾರಣ ಹವಾಮಾನ ಆಧರಿಸಿ ಶಫಾರಸ್ಸು ಪ್ರಾಮಾಣದಲ್ಲಿ ಸಾರಜನಕ ರಸಗೊಬ್ಬರ ಬಳಸಲು ತಿಳಿಸಿದ್ದಾರೆ.
ಅಧಿಕೃತ ಮಾರಾಟಗಾರರಿಂದ ಬಿಲ್ ಪಡೆದು ಕೃಷಿ ಪರಿಕರಗಳನ್ನು ಖರೀದಿಸುವುದು ಹಾಗೂ ನಕಲಿ ಬಿತ್ತನೆ ಬೀಜ, ರಸಗೂಬ್ಬರ ಹಾಗೂ ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ದೂರು ಸಲ್ಲಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿದೇಶಕರು ತಿಳಿಸಿದ್ದಾರೆ.

Joint Director of Agriculture ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...