Wednesday, December 17, 2025
Wednesday, December 17, 2025

International Yoga Day ಕೇಂದ್ರ ಕಾರಾಗೃಹದಲ್ಲಿ ಯೋಗಾಸನ ತರಬೇತಿ & ವ್ಯಕ್ತಿತ್ವ ವಿಕಸನ ಶಿಬಿರ

Date:

International Yoga Day ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಖೈದಿಗಳ ಮಾನಸಿಕ ಪರಿವರ್ತನೆಗಾಗಿ ವಿಶೇಷ ಯೋಗಾಸನ ತರಬೇತಿ ವ್ಯಕ್ತಿತ್ವ ವಿಕಸನ ಶಿಬಿರ ಯೋಗ ಗೀತಾಗಾಯನ ಕಾರ್ಯಕ್ರಮವನ್ನು ಜೂ: 17ರಿಂದ ಜೂ: 21ರವರೆಗೆ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದೆ ಎಂದು ಯೋಗಾಚಾರ್ಯ ಪತಂಜಲಿ ಜೆ.ನಾಗರಾಜ್ ಹೇಳಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಕೇಂದ್ರ ಕಾರಾಗೃಹ, ಶಿವಮೊಗ್ಗ, ಜೇಸಿಐ ಶಿವಮೊಗ್ಗ ಶಾಶ್ವತಿ ಘಟಕ, ಪತಂಜಲಿ ಯೋಗ ಕೇಂದ್ರ, ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ, ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಜೂ: 17ರಂದು ಬೆಳಿಗ್ಗೆ 10:30 ಗಂಟೆಗೆ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ|| ಅನಿತಾ ಆರ್. ಉದ್ಘಾಟಿಸುವರು.

ಅಧ್ಯಕ್ಷತೆಯನ್ನು ಪತಂಜಲಿ ರಾಜ್ಯ ಸಮಿತಿ ಸದಸ್ಯ ಜೇಸಿಐ ಶಿವಮೊಗ್ಗ ಅಧ್ಯಕ್ಷ ಜೇಸಿ ನರಸಿಂಹಮೂರ್ತಿ ವಹಿಸುವರು ಎಂದರು.

ಪ್ರತಿ ವರ್ಷದಂತೆ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹೆಚ್ಚು ಅರ್ಥಬದ್ಧವಾಗಿ ಆಚರಣೆ ಮಾಡಲಾಗುತ್ತಿದೆ. ಹಲವಾರು ವರ್ಷಗಳಿಂದ ಕಾರಾಗೃಹದಲ್ಲಿ ಇರುವ ಖೈದಿಗಳ ಮಾನಸಿಕ ಪರಿವರ್ತನೆಗಾಗಿ ಯೋಗಾಸನ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.ಳ
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಕಾರಾಗೃಹ ಸುಧಾರಣಾ ಸಮಿತಿ ಹಾಗೂ ಬೆಂಗಳೂರಿನ ಕಾರಾಗೃಹಗಳ ಇಲಾಖೆಯ ಮುಖ್ಯಸ್ಥರು, ಕೇಂದ್ರ ಕಾರಾಗೃಹದ ಮುಖ್ಯಸ್ಥರು ತರಬೇತಿ ಶಿಬಿರ ಮಾಡಲು ಅನುಮತಿ ನೀಡಿದ್ದಾರೆ. ಜೂ: 17ರಿಂದ ಜೂ 21ರವರೆಗೆ ಪ್ರತಿ ದಿನ ಬೆಳಿಗ್ಗೆ 7:30ರಿಂದ 8:30ರವರೆಗೆ ಯೋಗಾಸನ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತಂಜಲಿ ಆಡಳಿತಾಧಿಕಾರಿ ಎಂ.ಪೂವಯ್ಯ ಮಾತನಾಡಿ, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಕಳೆದ 27 ವರ್ಷಗಳಿಂದ ನಿರಂತರವಾಗಿ ಯೋಗ, ಆರೋಗ್ಯ, ಜಾನಪದ ಕಲೆ, ಯುವಜನಮೇಳ, ಕೀರ್ತನೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪರಿಸರ, ಸಮಾಜಸೇವೆಯನ್ನು ಸಲ್ಲಿಸುತ್ತಾ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.

International Yoga Day ಜೇಸಿಐ ಶಿವಮೊಗ್ಗ ಶಾಶ್ವತಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ, ಜೇಸಿ ಸೆನೆಟರ್ ಶಾಸ್ತ್ರಿ ಕಲಾವಿದ ಮಾಧವಮೂರ್ತಿ, ಪತಂಜಲಿ ಸಂಸ್ಥೆ ಅಧ್ಯಕ್ಷೆ ಎ.ಹೆಚ್.ಶ್ಯಾಮಲಾ, ನಿರ್ದೇಶಕರಾದ ಸುಶೀಲಾ ಭವಾನಿಶಂಕರ್‌ರಾವ್, ಭವಾನಿಶಂಕರ್‌ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಿಸರ ಸಿ.ರಮೇಶ್, ಅನಿತಾ ಸಿರಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...