Monday, February 2, 2026
Monday, February 2, 2026

International Yoga Day ಕೇಂದ್ರ ಕಾರಾಗೃಹದಲ್ಲಿ ಯೋಗಾಸನ ತರಬೇತಿ & ವ್ಯಕ್ತಿತ್ವ ವಿಕಸನ ಶಿಬಿರ

Date:

International Yoga Day ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಖೈದಿಗಳ ಮಾನಸಿಕ ಪರಿವರ್ತನೆಗಾಗಿ ವಿಶೇಷ ಯೋಗಾಸನ ತರಬೇತಿ ವ್ಯಕ್ತಿತ್ವ ವಿಕಸನ ಶಿಬಿರ ಯೋಗ ಗೀತಾಗಾಯನ ಕಾರ್ಯಕ್ರಮವನ್ನು ಜೂ: 17ರಿಂದ ಜೂ: 21ರವರೆಗೆ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದೆ ಎಂದು ಯೋಗಾಚಾರ್ಯ ಪತಂಜಲಿ ಜೆ.ನಾಗರಾಜ್ ಹೇಳಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಕೇಂದ್ರ ಕಾರಾಗೃಹ, ಶಿವಮೊಗ್ಗ, ಜೇಸಿಐ ಶಿವಮೊಗ್ಗ ಶಾಶ್ವತಿ ಘಟಕ, ಪತಂಜಲಿ ಯೋಗ ಕೇಂದ್ರ, ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ, ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಜೂ: 17ರಂದು ಬೆಳಿಗ್ಗೆ 10:30 ಗಂಟೆಗೆ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ|| ಅನಿತಾ ಆರ್. ಉದ್ಘಾಟಿಸುವರು.

ಅಧ್ಯಕ್ಷತೆಯನ್ನು ಪತಂಜಲಿ ರಾಜ್ಯ ಸಮಿತಿ ಸದಸ್ಯ ಜೇಸಿಐ ಶಿವಮೊಗ್ಗ ಅಧ್ಯಕ್ಷ ಜೇಸಿ ನರಸಿಂಹಮೂರ್ತಿ ವಹಿಸುವರು ಎಂದರು.

ಪ್ರತಿ ವರ್ಷದಂತೆ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹೆಚ್ಚು ಅರ್ಥಬದ್ಧವಾಗಿ ಆಚರಣೆ ಮಾಡಲಾಗುತ್ತಿದೆ. ಹಲವಾರು ವರ್ಷಗಳಿಂದ ಕಾರಾಗೃಹದಲ್ಲಿ ಇರುವ ಖೈದಿಗಳ ಮಾನಸಿಕ ಪರಿವರ್ತನೆಗಾಗಿ ಯೋಗಾಸನ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.ಳ
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಕಾರಾಗೃಹ ಸುಧಾರಣಾ ಸಮಿತಿ ಹಾಗೂ ಬೆಂಗಳೂರಿನ ಕಾರಾಗೃಹಗಳ ಇಲಾಖೆಯ ಮುಖ್ಯಸ್ಥರು, ಕೇಂದ್ರ ಕಾರಾಗೃಹದ ಮುಖ್ಯಸ್ಥರು ತರಬೇತಿ ಶಿಬಿರ ಮಾಡಲು ಅನುಮತಿ ನೀಡಿದ್ದಾರೆ. ಜೂ: 17ರಿಂದ ಜೂ 21ರವರೆಗೆ ಪ್ರತಿ ದಿನ ಬೆಳಿಗ್ಗೆ 7:30ರಿಂದ 8:30ರವರೆಗೆ ಯೋಗಾಸನ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತಂಜಲಿ ಆಡಳಿತಾಧಿಕಾರಿ ಎಂ.ಪೂವಯ್ಯ ಮಾತನಾಡಿ, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಕಳೆದ 27 ವರ್ಷಗಳಿಂದ ನಿರಂತರವಾಗಿ ಯೋಗ, ಆರೋಗ್ಯ, ಜಾನಪದ ಕಲೆ, ಯುವಜನಮೇಳ, ಕೀರ್ತನೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪರಿಸರ, ಸಮಾಜಸೇವೆಯನ್ನು ಸಲ್ಲಿಸುತ್ತಾ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.

International Yoga Day ಜೇಸಿಐ ಶಿವಮೊಗ್ಗ ಶಾಶ್ವತಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ, ಜೇಸಿ ಸೆನೆಟರ್ ಶಾಸ್ತ್ರಿ ಕಲಾವಿದ ಮಾಧವಮೂರ್ತಿ, ಪತಂಜಲಿ ಸಂಸ್ಥೆ ಅಧ್ಯಕ್ಷೆ ಎ.ಹೆಚ್.ಶ್ಯಾಮಲಾ, ನಿರ್ದೇಶಕರಾದ ಸುಶೀಲಾ ಭವಾನಿಶಂಕರ್‌ರಾವ್, ಭವಾನಿಶಂಕರ್‌ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಿಸರ ಸಿ.ರಮೇಶ್, ಅನಿತಾ ಸಿರಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...