Monday, December 15, 2025
Monday, December 15, 2025

Chittara Star Award ರಮೇಶ್ ಬೇಗಾರ್ ನಿರ್ದೇಶನದ ” ಜಲಪಾತ” ಚಿತ್ರಕ್ಕೆ ಚಿತ್ತಾರ ಸ್ಟಾರ್ ಅವಾರ್ಡ್

Date:

Chittara Star Award ಇಂಡಸ್ ಹರ್ಬ್ಸ್ ನ ರವೀಂದ್ರ ತುಂಬರಮನೆ ವಿಷಯ ವಿನ್ಯಾಸ ಗೈದು ನಿರ್ಮಿಸಿ, ಮಲೆನಾಡ ಕ್ರಿಯಾಶೀಲ ರಮೇಶ್ ಬೇಗಾರ್ ರಚಿಸಿ ನಿರ್ದೇಶಿಸಿದ ಜಲಪಾತ ಸಿನಿಮಾ ಕ್ಕೆ 2024 ರ ಚಿತ್ತಾರ ಸ್ಟಾರ್ ಅವಾರ್ಡ್ ಲಭಿಸಿದೆ.

ಉತ್ತಮ ಸಾಮಾಜಿಕ ಪರಿಣಾಮ ಬೀರುವ ಚಿತ್ರ ಎಂಬ ವಿಭಾಗದಲ್ಲಿ ಜಲಪಾತ ನಾಮ ನಿರ್ದೇಶನಗೊಂಡಿತ್ತು.

ಜೊತೆಗೆ ಚಿತ್ರದ ನಾಯಕ ನಟಿ ನಾಗಶ್ರೀ ಬೇಗಾರ್ ಮೊದಲ ಸಿನಿಮಾದ ಶ್ರೇಷ್ಠ ನಾಯಕಿ ವಿಭಾಗದಲ್ಲಿ ನಾಮಿನೆಟ್ ಆಗಿದ್ದರು. ಈ ಪೈಕಿ ಸಿನಿಮಾ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಆನ್ ಲೈನ್ ವೋಟಿಂಗ್ ಮತ್ತು ತೀರ್ಪು ಗಾರ ತಂಡ ದ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಜೂನ್ 15 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ಗ್ರಾಂಡ್ ಸಭಾಂಗಣ ದಲ್ಲಿ ಚಿತ್ತಾರ ಸಿನಿ ಮ್ಯಾಗಜಿನ್ ಕಲರ್ಸ್ ಕನ್ನಡ ಸಹಯೋಗದಲ್ಲಿ ಆಯೋಜಿಸಿದ್ದ ಚಂದನವನ ಸಂಭ್ರಮ ಕಾರ್ಯಕ್ರಮ ದಲ್ಲಿ ಪ್ರಸಿದ್ಧ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮನ್ಸೋರೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ನಿರಂಜನ್ ದೇಶಪಾಂಡೆ ಮತ್ತು ಜಾಹ್ನವಿ ಕಾರ್ತಿಕ್ ನಿರೂಪಣೆ ಯ ಈ ವರ್ಣ ರಂಜಿತ ಕಾರ್ಯಕ್ರಮ ದಲ್ಲಿ ಪ್ರಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ಸಿನಿಮಾ ರಂಗದ ಪ್ರಸಿದ್ದ ಕಲಾವಿದರು ಭಾಗವಹಿಸಿದ್ದರು.

ಜಲಪಾತ ತಂಡದ ಪರವಾಗಿ ನಿರ್ಮಾಪಕ ರವೀಂದ್ರ ಮತ್ತು ನಿರ್ದೇಶಕ ರಮೇಶ್ ಬೇಗಾರ್, ನಾಯಕ ರಜನೀಶ್, ನಾಯಕಿ ನಾಗಶ್ರೀ ಈ ಪ್ರಶಸ್ತಿಯನ್ನು ಸ್ವೀಕರಿದರು.

Chittara Star Award ಕಾರ್ಯಕ್ರಮದಲ್ಲಿ ಮುಖ್ಯ ತಾಂತ್ರಿಕ ವರ್ಗ ಛಾಯಾಗ್ರಾಹಕ ಶಶಿರ ಶೃಂಗೇರಿ, ಸಂಕಲನ ಕಾರ ಅವಿನಾಶ್ ಶೃಂಗೇರಿ ಕಲಾನಿರ್ದೇಶಕ ಅಭಿಷೇಕ್ ಮತ್ತು ನಿರ್ವಾಹಕ ಕಾರ್ತಿಕ್ ಶೃಂಗೇರಿ ಇವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಮೇಶ್ ಮಾತನಾಡಿ ” ಇದೊಂದು ಸಾಮಾಜಿಕ ಸಂದೇಶ ದ ಚಿತ್ರವಾದರೂ ವಾಣಿಜ್ಯ ವಿಭಾಗ ದಲ್ಲೂ ಉತ್ತಮ ಸಾಧನೆ ಮಾಡಿದ ಹೆಗ್ಗಳಿಕೆ ಪಡೆದಿದೆ. ಮಲೆನಾಡ ಗ್ರಾಮೀಣ ಪ್ರದೇಶ ದ ಕಲಾವಿದ ತಂತ್ರಜ್ಞರಿಗೆ ಮೊದಲು ಒಳಿದ ಪ್ರಶಸ್ತಿ ಇದಾಗಿದ್ದು ಮಲೆನಾಡ ಸಮಸ್ತ ಜನತೆಗೆ ಪ್ರಶಸ್ತಿ ಯನ್ನು ಸಮರ್ಪಿಸುತ್ತೇವೆ ” ಎಂದರು.

2023 ರಲ್ಲಿ ಚಿತ್ರೀಕರಣ ಗೊಂಡು ಬಿಡುಗಡೆ ಆಗಿ ಎ ಬಿ ಸಿ ಕೇಂದ್ರ ಗಳಲ್ಲಿ 50 ದಿನ ಪ್ರದರ್ಶಿತ ಗೊಂಡ ಜಲಪಾತ ಪ್ರತಿಷ್ಠಿತ ಆಮೇಜಾನ್ ಪ್ರೈಮ್ ನಲ್ಲೂ ಬಿಡುಗಡೆ ಗೊಂಡಿದೆ ಮಾತ್ರವಲ್ಲ 8 ಕ್ಕೂ ಮಿಕ್ಕಿದ ಐ ಎಂ ಡಿ ಬಿ ರೇಟಿಂಗ್ ದಾಖಲಿಸಿದ ವಿಶಿಷ್ಟ ಸಾಧನೆ ಮಾಡಿ ಎಲ್ಲರ ಗಮನ ಸೆಳೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...