Sunday, August 23, 2026
Sunday, August 23, 2026

B. Y. Vijayendra ಪೆಟ್ರೋಲ್- ಡಿಸೆಲ್ ದರ ಇಳಿಸುವವರೆಗೆ ಬಿಜೆಪಿಯ ಹೋರಾಟ ನಿಲ್ಲದು- ಬಿ.ವೈ.ವಿಜಯೇಂದ್ರ

Date:

B. Y. Vijayendra ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಪಕ್ಷದ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ.

ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ, ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಈ ಬೆಲೆ ಏರಿಕೆಯ ಬಿಸಿ ಪಂಪ್ ಸೆಟ್, ಟ್ರಾಕ್ಟರ್ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ. ಅದರ ಜೊತೆಗೆ ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

B. Y. Vijayendra ರಾಜ್ಯದ ಸಂಪನ್ಮೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನ್ಮೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ, ಈ ಕೂಡಲೇ ಪೆಟ್ರೋಲ್ – ಡೀಸೆಲ್ ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್ ಪಡೆಯದಿದ್ದರೆ ಬಿಜಿಪಿ ಪಕ್ಷವು ದರ ಹಿಂಪಡೆಯುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ಎಚ್ಚರಿಸ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ x ಖಾತೆಯಲ್ಲಿ‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...