Tuesday, February 3, 2026
Tuesday, February 3, 2026

Film chamber ರೇಣುಕಯ್ಯಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್ ನಿಂದ ₹5 ಲಕ್ಷ ಸಾಂತ್ವನ ಹಣ- ಸುರೇಶ್

Date:

Film chamber ಚಿತ್ರನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಸ್ಥರನ್ನು ಇಂದು ಭೇಟಿಯಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷ ಸುರೇಶ್ ಸಂತ್ವಾನ ಹೇಳಿದರು. ಪಿಲ್ಮ್ ಚೇಂಬರ್ ವತಿಯಿಂದ ಅವರಿಗೆ 5 ಲಕ್ಷ ರೂ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಲ್ಲಿಗೆ ಬಂದಿರೋದು ಸಂತಾಪಕ್ಕೆ ಅಷ್ಟೇ ಯಾವುದೇ ರಾಜೀ ಇಲ್ಲ. ನಮ್ಮ ಫಿಲ್ಮ್ ಚೇಂಬರ್‌ ವತಿಯಿಂದ ಐದು ಲಕ್ಷ ರೂಪಾಯಿ ನೀಡಿದ್ದೇವೆ. ಇಡೀ ಚಿತ್ರರಂಗ ಮುಂದೆಯೂ ಸಹ ನೊಂದ ಕುಟುಂಬದವರ ಜೊತೆ ನಿಲ್ಲಲಿದೆ. ಕುಟುಂಬಕ್ಕೆ ಐದು ಲಕ್ಷ ಸಾಂಕೇತಿಕವಾಗಿ ಕೊಡಲಾಗಿದೆ. ಮುಂದೆಯೂ ಇನ್ನೂ ಸಹಾಯ ಹೇಗೆ ಮಾಡಬೇಕು ಮಾಡ್ತಿವಿ. ಶಾಶ್ವತ ಪರಿಹಾರ ನೀಡಲು ನಿರ್ಧಾರ ಮಾಡುತ್ತೇವೆ. ಚಿತ್ರರಂಗ ಕ್ಷಮೆ ಕೇಳಲು ಇಲ್ಲಿಗೆ ಬಂದಿದ್ದೇವೆ ಇದನ್ನು ವೈಭವಿಕರಿಸಬಾರದು ಎಂದು ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಸುರೇಶ್ ಹೇಳಿದರು.
Film chamber ರೇಣುಕಾ ಸ್ವಾಮಿ ಹತ್ಯೆ ಘಟನೆ ಬಗ್ಗೆ ಕಾನೂನಿನಡಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದೀಗ ರಾಷ್ಟ್ರೀಯ ಅಂತಾರಾಷ್ಟ್ರೀಯ ಸುದ್ದಿಯಾಗಿದೆ. ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ಬಂದಿದೆ ಎಂದರು. ಇನ್ನು ಇದೇ ವೇಳೆ ದರ್ಶನ್ ಸಿನಿಮಾ ಬ್ಯಾನ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ನಿರ್ಧಾರ ನಾವು ಮಾಡೋಕೆ ಆಗೊಲ್ಲ. ಕಲಾವಿದರ ಸಂಘ, ನಿರ್ಮಾಪಕರ ಸಂಘ, ಫ್ಯಾನ್ಸ್ ಪಾಲೋವರ್ಸ್ ಕೂಡ ಇದೆ. ಅಲ್ಲಿ ಸಭೆ ಮಾಡಿದ ನಂತರ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದರು.
ಈ ಹಿಂದೆಯೂ ರಾಜಕುಮಾರ್ ವಿಷ್ಣುವರ್ಧನ್ ಶಂಕರ್‌ನಾಗ್ ಅಂಬರೀಶ್‌ಗೂ ಫ್ಯಾನ್ ಇತ್ತು. ಆದರೆ ಇತ್ತೀಚಿನ ಫ್ಯಾನ್ಸ್ ಪ್ರಚೋದನೆಗೆ ಒಳಗಾಗುತ್ತಿದ್ದಾರೆ. ಆ ರೀತಿ ಯಾರೂ ಪ್ರಚೋದನೆಗೆ ಒಳಗಾಗಬಾರದು. ಆ ರೀತಿ ಒಳಗಾಗಿಯೇ ಇಂತಹ ಘಟನೆ ನಡೆದುಹೋಗಿದೆ. ಕೊರೊನಾ ಬಳಿಕ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಚಿತ್ರರಂಗ, ವಾಣಿಜ್ಯ ಮಂಡಳಿ ಬಗ್ಗೆ ದೂಷಣೆ ಮಾಡಬೇಡಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...