Sunday, April 20, 2025
Sunday, April 20, 2025

Forest Department ಮಂಡಗದ್ದೆ ಅರಣ್ಯಾಧಿಕಾರಿ ಎಂ.ಪಿ.ಆದರ್ಶ ‌ಅವರಿಗೆ ಸಿಎಂ ಸುವರ್ಣಪದಕ

Date:

Forest Department ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಪಿ. ಆದರ್ಶರವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ 2022– 23ನೇ ಸಾಲಿನ ಚಿನ್ನದ ಪದಕದ ಪುರಸ್ಕಾರವನ್ನು ನೀಡಲಾಗಿದೆ.
ವಲಯ ಅರಣ್ಯ ಅಧಿಕಾರಿ ಆದರ್ಶ ಅವರು ಈ ಹಿಂದೆ ಹೊಸನಗರ ತಾಲೂಕಿನ ಹೊಸನಗರ, ನಗರದ ವಲಯ ಅರಣ್ಯ ಅಧಿಕಾರಿ ಸೇವೆ ಸಲ್ಲಿಸಿ ಕಳೆದ ಎರಡು ವರ್ಷಗಳಿಂದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಅರಣ್ಯ ಭೂಮಿ ಸಂರಕ್ಷಣೆ, ನೈಸರ್ಗಿಕವಾಗಿರುವ ಅರಣ್ಯ ಪುನರುತ್ಪತ್ತಿ ಸೇರಿದಂತೆ ಹತ್ತಾರು ಉತ್ತಮ ಕೆಲಸ ಮಾಡಿದ ವಿಷಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮಂಡಗದ್ದೆಯ ವಲಯ ಅರಣ್ಯ ಅಧಿಕಾರಿಯಾಗಿ ಆದರ್ಶರವರು ಅರಣ್ಯ ಮತ್ತು ಅರಣ್ಯ ಭೂಮಿಯನ್ನು ಸಂರಕ್ಷಣೆ ಮಾಡುವುದರ ಜೊತೆಯಲ್ಲಿ ಅನೇಕ ಭೂ ಒತ್ತುವರಿ, ಕಬಳಿಕೆಯನ್ನು ಪತ್ತೆ ಹಚ್ಚಿ ಕ್ರಮ ಜರುಗಿಸುವುದರೊಂದಿಗೆ ಹೊಸ ಒತ್ತುವರಿಗಳನ್ನು ತೆರವುಗೊಳಿಸುವುದು ಹಿಂದಿನ ಒತ್ತುವರಿ, ಕಬ್ಬಳಿಕೆಗಳನ್ನು ನ್ಯಾಯಾಲಯದಲ್ಲಿ ಮತ್ತು ಇಲಾಖೆಯ ಮಟ್ಟದಲ್ಲಿ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕ್ರಮ ಜರುಗಿಸಲು ಮುಂದಾಗಿದ್ದು, ಅರಣ್ಯ ಭೂಮಿಯ ಅಕ್ರಮ ಮರ ಕಡತಲೆ, ವನ್ಯಜೀವಿಗಳ ಬೇಟೆಯಾಡಿ ಪ್ರಾಣಿ ಗಳ ಹತ್ತೆ, ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಮರಳು, ಮಣ್ಣು ತೆಗೆದು ಸಾಗಿಸುವುದು ಮುಂತಾದ ಅನೇಕ ಗಂಭೀರ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸುವುದರ ಜೊತೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಸರ್ಕಾರ ಪರಿಗಣಿಸಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರವನ್ನು ನೀಡಿ ಘೋಷಣೆ ಮಾಡಿರುತ್ತದೆ.
Forest Department ಆದರ್ಶರವರು ಮಂಡ್ಯ ಜಿಲ್ಲೆಯ ನಾಗಮಂಗಲ, ಶಿವಮೊಗ್ಗ ಹೊಸನಗರ, ನಗರ ಮುಂತಾದ ಊರುಗಳಲ್ಲಿ ಅರಣ್ಯ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.
ಅವರಿಗೆ ರಾಜ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕ ಲಭಿಸಿರುವುದು ತೀರ್ಥಹಳ್ಳಿಯ ಹೆಮ್ಮೆಯ ವಿಚಾರವಾಗಿದ್ದು ತೀರ್ಥಹಳ್ಳಿಗೆ ಮತ್ತು ಅರಣ್ಯ ಇಲಾಖೆಗೆ ರಾಜ್ಯಮಟ್ಟದಲ್ಲಿ ಮತ್ತೊಂದು ಕಿರೀಟ ಮತ್ತು ಗೌರವ ಲಭಿಸಿದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...