Monday, August 3, 2026
Monday, August 3, 2026

Department of Animal Husbandry ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕೆ ಕಾರ್ಯಕ್ರಮ

Date:

Department of Animal Husbandry ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ದಿನಾಂಕ: 20-06-2024 ರಿಂದ 20-07-2024 ರವರೆಗೆ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮೇಕೆ ಸಿಡುಬು ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಚರ್ಮ ಗಂಟು ರೋಗವು ಕ್ಯಾಪ್ರಿ ಫಾಕ್ಸ್ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಮೇಕೆ ಸಿಡುಬು ಲಸಿಕೆಯಿಂದ ಇದನ್ನು ತಡೆಗಟ್ಟಬಹುದಾಗಿದೆ.
2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಈ ರೋಗೋದ್ರೇಕವು ಅತಿ ಹೆಚ್ಚಾಗಿ ಮಳೆಗಾಲ ಮುಕ್ತಾಯವಾದ ಕೂಡಲೇ ಕಂಡುಬಂದಿರುತ್ತದೆ. ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆಗಾಲದಲ್ಲಿ ಹೆಚ್ಚಾಗುವ ಸೊಳ್ಳೆ, ನೊಣ ಹಾಗೂ ಕೀಟಗಳ ಕಡಿತದಿಂದ ರೋಗವು ಜಾನುವಾರುವಿನಿಂದ ಜಾನುವಾರುವಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ರೋಗದ ವಿರುದ್ಧ 2024-25 ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಎಲ್ಲ ಗ್ರಾಮಗಳಲ್ಲಿರುವ ದನಗಳಿಗೆ ಜೂನ್ 20 ರಿಂದ ಜುಲೈ 20 ರವರೆಗೆ ಮೇಕೆ ಸಿಡುಬು ಲಸಿಕೆ ಹಾಕಲಾಗುವುದು.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು, ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ದನಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು.

Department of Animal Husbandry ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಶಿವಯೋಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...