Monday, August 24, 2026
Monday, August 24, 2026

NR Pura Police ಭದ್ರಾ ಹಿನ್ನೀರಿನಲ್ಲಿ ಮುಳುಗಿದವರ ಶವಗಳು ಪತ್ತೆ

Date:

NR Pura Police ತೆಪ್ಪ ಮುಳುಗಿ ಬುಧವಾರ ಭದ್ರಾ ನದಿಯಲ್ಲಿ ಮೂವರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಭದ್ರಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆಯಾಗಿದೆ.

ಮೃತದೇಹವನ್ನು ಅಗ್ನಿಶಾಮಕ ದಳ, ಸ್ಥಳೀಯ ಮುಳುಗು ತಜ್ಞರಿಂದ ಪತ್ತೆಹಚ್ಚಲಾಗಿದೆ. ಮೃತದೇಹವನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನಿಸಲಾಗಿದೆ.

ನಿನ್ನೆಯೂ ಶೋಧ ಕಾರ್ಯ ನಡೆಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು. ಕತ್ತಲಾದ ಬಳಿಕ ಶೋಧ ಕಾರ್ಯ ಸ್ಥಗಿತಗೊಳಿಸಿದ್ದರು. ಇಂದು ಮುಂಜಾನೆಯಿಂದ ಶೋಧ ಕಾರ್ಯ ಮುಂದುವರೆದಿತ್ತು. ನಿನ್ನೆ ಪ್ರವಾಸಕ್ಕೆ ಭದ್ರಾ ನದಿ ಹಿನ್ನೀರಿಗೆ ಆಗಮಿಸಿದ್ದ ನಾಲ್ವರು ಸ್ನೇಹಿತರಲ್ಲಿ ಮೂವರು ತೆಪ್ಪದಲ್ಲಿ ಹೋಗಿದ್ದರು. ಓರ್ವ ದಡದಲ್ಲಿ ನಿಂತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

NR Pura Police ತೆಪ್ಪದಲ್ಲಿ ತೆರಳುವಾಗ ತೆಪ್ಪ ಮಗುಚಿ ಮೂವರು ನೀರು ಪಾಲಾಗಿದ್ದಾರೆ. ಆದೀಲ್, ಸಾಜೀದ್, ಅಫ್ಧಾ ಖಾನ್ ಮೂವರು ಮೃತ ದುರ್ದೈವಿಗಳಾಗಿದ್ದಾರೆ.

ಈ ಮೂವರು ಮೃತರು ಶಿವಮೊಗ್ಗದ ವಿದ್ಯಾನಗರದ ಇಸ್ಲಾಮ್‌ಪುರ ನಿವಾಸಿಗಳಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...