Monday, February 2, 2026
Monday, February 2, 2026

Sooraj Revanna ಸೂರಜ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ: ಯುವಕನ ದೂರು

Date:

Sooraj Revanna ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ.

ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಾಸನ ಜಿಲ್ಲೆ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಬೆಂಗಳೂರಿನಲ್ಲಿ ಮುಖಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಸುಮಾರು 16 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಯುವಕ ಲೋಕಸಭೆ ಚುನಾವಣೆಯ ವೇಳೆ ಹಾಸನದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ. ಈ ವೇಳೆ ಆತನನ್ನು ಪರಿಚಯ ಮಾಡಿಕೊಂಡಿದ್ದ ಸೂರಜ್ ರೇವಣ್ಣ, ಬಳಿಕ ಆತನಿಗೆ ಮೆಸೇಜ್ ಮಾಡಿ ಆಪ್ತತೆ ಬೆಳೆಸಿಕೊಂಡಿದ್ದರು. ಜೂನ್ 16ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.
Sooraj Revanna “ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದ ಸೂರಜ್ ರೇವಣ್ಣ, ಗನ್ನಿಕಡದ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ಕೊಟ್ಟು ಕರೆಸಿಕೊಂಡಿದ್ದರು. ಸಂದೇಶ ನಂಬಿಕೊಂಡು ಅಲ್ಲಿಗೆ ಹೋಗಿದ್ದೆ. ನಾನು ತೋಟದ ಮನೆಗೆ ತಲುಪಿಪಿದ ಬಳಿಕ, ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಸಲಿಂಗಕಾಮಕ್ಕೆ ಒತ್ತಾಯಿಸಿದ್ದಾರೆ. ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿ, ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...