Sunday, December 14, 2025
Sunday, December 14, 2025

Sooraj Revanna ಸೂರಜ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ: ಯುವಕನ ದೂರು

Date:

Sooraj Revanna ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ.

ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಾಸನ ಜಿಲ್ಲೆ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಬೆಂಗಳೂರಿನಲ್ಲಿ ಮುಖಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಸುಮಾರು 16 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಯುವಕ ಲೋಕಸಭೆ ಚುನಾವಣೆಯ ವೇಳೆ ಹಾಸನದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ. ಈ ವೇಳೆ ಆತನನ್ನು ಪರಿಚಯ ಮಾಡಿಕೊಂಡಿದ್ದ ಸೂರಜ್ ರೇವಣ್ಣ, ಬಳಿಕ ಆತನಿಗೆ ಮೆಸೇಜ್ ಮಾಡಿ ಆಪ್ತತೆ ಬೆಳೆಸಿಕೊಂಡಿದ್ದರು. ಜೂನ್ 16ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.
Sooraj Revanna “ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದ ಸೂರಜ್ ರೇವಣ್ಣ, ಗನ್ನಿಕಡದ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ಕೊಟ್ಟು ಕರೆಸಿಕೊಂಡಿದ್ದರು. ಸಂದೇಶ ನಂಬಿಕೊಂಡು ಅಲ್ಲಿಗೆ ಹೋಗಿದ್ದೆ. ನಾನು ತೋಟದ ಮನೆಗೆ ತಲುಪಿಪಿದ ಬಳಿಕ, ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಸಲಿಂಗಕಾಮಕ್ಕೆ ಒತ್ತಾಯಿಸಿದ್ದಾರೆ. ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿ, ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...