Thursday, March 19, 2026
Thursday, March 19, 2026

Shivamogga Science PU College ಜೂನ್ 26, ಆರ್ಯ ವಿಜ್ಞಾನ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

Date:

Shivamogga Science PU College ಶಿವಮೊಗ್ಗ ನಗರಕ್ಕೆ ವಿಜ್ಞಾನ ಪಿಯು ಕಾಲೇಜಿನ ಅವಶ್ಯಕತೆಯನ್ನು ಮನಗಂಡು ಎಲ್ಲಾ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರುವ ಎಲ್‌ಬಿಎಸ್ ನಗರದ ಎರಡನೇ ತಿರುವಿನಲ್ಲಿ ಆರ್ಯ ವಿಜ್ಞಾನ ಪಿಯು ಕಾಲೇಜಿನ ನೂತನ ಕಟ್ಟಡವನ್ನು ಜೂ. 26ರಂದು ಬೆಳಿಗ್ಗೆ 9.30ಕ್ಕೆ ಶೃಂಗೇರಿ ಶ್ರೀಗಳಾದ ಜಗದ್ಗುರು ಶ್ರೀ ವಿಧುಶೇಖರಭಾರತೀರವರು ಉದ್ಘಾಟಿಸಲಿದ್ದಾರೆ.

ಈ ಕುರಿತು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಾಲೇಜಿನ ಕಾರ್ಯದರ್ಶಿ ಎನ್. ರಮೇಶ್ ಕಾಲೇಜನ್ನು ಈ ವರ್ಷದಿಂದಲೇ ಆರಂಭಿಸಲಾಗಿದೆ. ಕಾಲೇಜಿನ ಕಟ್ಟಡದ ಉದ್ಘಾಟನೆ ಮಾತ್ರ ಜೂ. ೨೬ರ ಬೆಳಿಗ್ಗೆ ನಡೆಯಲಿದೆ ಎಂದರು.

ಶೃಂಗೇರಿ ಶ್ರೀಕ್ಷೇತ್ರದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರೆ ಬುದ್ಧಿವಂತರಾಗುತ್ತಾರೆ ಎಂಬ ಮಾತಿದೆ. ಈ ಹಿನ್ನಲೆಯಲ್ಲಿ ಅವರನ್ನು ನಮ್ಮ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ. ಉದ್ಘಾಟನೆಯ ದಿನ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಗುವುದು ಎಂದರು.

Shivamogga Science PU College ಶ್ರೀಗಳಿಂದ ಸರಸ್ವತಿ ಪೂಜೆ ನಡೆಸಲಾಗುವುದು. ಬಳಿಕ ಧೂಳಿ ಪೂಜೆ ನೆರವೇರಿಸಲಾಗುವುದು ಅನಂತರ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಶ್‌ರೀಗಳು ಅಲ್ಲಿ ಆಶೀರ್ವಚನ ನೀಡಿ, ಭಕ್ತರಿಗೆ ಫಲಮಂತ್ರಾಕ್ಷತೆ ನೀಡುವರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಶೃಂಗೇರಿ ಶಂಕರಮಠದ ಧರ್ಮದರ್ಶಿ ಡಾ. ಪಿ. ನಾರಾಯಣ್, ಶಾಸಕ ಎಸ್. ಎನ್.ಚನ್ನಬಸಪ್ಪ, ಡಾ. ಮಂಜುನಾಥ ಭಂಡಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಆರ್ಯ ಪಿಯು ಕಾಲೇಜಿನಲ್ಲಿ ಈಗ ೧೧೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಮಾರು ೧೦ ಕ್ಲಾಸ್ ರೂಮ್‌ಗಳಿವೆ, ೩ ಸುಸಜ್ಜಿತ ಲ್ಯಾಬ್‌ಗಳಿವೆ ಪಿಯು ಪಾಠದ ಜೊತೆ ಜೊತೆಗೆಯೇ ನೀಟ್, ಜೆಇಇ ಪರೀಕ್ಷೆಗೂ ತರಬೇತಿ ನೀಡಲಾಗುವುದು. ಉತ್ತಮ ಉಪನ್ಯಾಸಕ ವರ್ಗದವರಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಮಂಡಳಿ ಖಜಂಚಿ ಬಿ.ಜೆ.ಸುನೀತಾ ದೇವಿ, ಉಪನ್ಯಾಸಕರಾದ ಕಣ್ಣನ್, ಪ್ರಕಾಶ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...