Monday, December 15, 2025
Monday, December 15, 2025

Shivamogga Science PU College ಜೂನ್ 26, ಆರ್ಯ ವಿಜ್ಞಾನ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

Date:

Shivamogga Science PU College ಶಿವಮೊಗ್ಗ ನಗರಕ್ಕೆ ವಿಜ್ಞಾನ ಪಿಯು ಕಾಲೇಜಿನ ಅವಶ್ಯಕತೆಯನ್ನು ಮನಗಂಡು ಎಲ್ಲಾ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರುವ ಎಲ್‌ಬಿಎಸ್ ನಗರದ ಎರಡನೇ ತಿರುವಿನಲ್ಲಿ ಆರ್ಯ ವಿಜ್ಞಾನ ಪಿಯು ಕಾಲೇಜಿನ ನೂತನ ಕಟ್ಟಡವನ್ನು ಜೂ. 26ರಂದು ಬೆಳಿಗ್ಗೆ 9.30ಕ್ಕೆ ಶೃಂಗೇರಿ ಶ್ರೀಗಳಾದ ಜಗದ್ಗುರು ಶ್ರೀ ವಿಧುಶೇಖರಭಾರತೀರವರು ಉದ್ಘಾಟಿಸಲಿದ್ದಾರೆ.

ಈ ಕುರಿತು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಾಲೇಜಿನ ಕಾರ್ಯದರ್ಶಿ ಎನ್. ರಮೇಶ್ ಕಾಲೇಜನ್ನು ಈ ವರ್ಷದಿಂದಲೇ ಆರಂಭಿಸಲಾಗಿದೆ. ಕಾಲೇಜಿನ ಕಟ್ಟಡದ ಉದ್ಘಾಟನೆ ಮಾತ್ರ ಜೂ. ೨೬ರ ಬೆಳಿಗ್ಗೆ ನಡೆಯಲಿದೆ ಎಂದರು.

ಶೃಂಗೇರಿ ಶ್ರೀಕ್ಷೇತ್ರದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರೆ ಬುದ್ಧಿವಂತರಾಗುತ್ತಾರೆ ಎಂಬ ಮಾತಿದೆ. ಈ ಹಿನ್ನಲೆಯಲ್ಲಿ ಅವರನ್ನು ನಮ್ಮ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ. ಉದ್ಘಾಟನೆಯ ದಿನ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಗುವುದು ಎಂದರು.

Shivamogga Science PU College ಶ್ರೀಗಳಿಂದ ಸರಸ್ವತಿ ಪೂಜೆ ನಡೆಸಲಾಗುವುದು. ಬಳಿಕ ಧೂಳಿ ಪೂಜೆ ನೆರವೇರಿಸಲಾಗುವುದು ಅನಂತರ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಶ್‌ರೀಗಳು ಅಲ್ಲಿ ಆಶೀರ್ವಚನ ನೀಡಿ, ಭಕ್ತರಿಗೆ ಫಲಮಂತ್ರಾಕ್ಷತೆ ನೀಡುವರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಶೃಂಗೇರಿ ಶಂಕರಮಠದ ಧರ್ಮದರ್ಶಿ ಡಾ. ಪಿ. ನಾರಾಯಣ್, ಶಾಸಕ ಎಸ್. ಎನ್.ಚನ್ನಬಸಪ್ಪ, ಡಾ. ಮಂಜುನಾಥ ಭಂಡಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಆರ್ಯ ಪಿಯು ಕಾಲೇಜಿನಲ್ಲಿ ಈಗ ೧೧೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಮಾರು ೧೦ ಕ್ಲಾಸ್ ರೂಮ್‌ಗಳಿವೆ, ೩ ಸುಸಜ್ಜಿತ ಲ್ಯಾಬ್‌ಗಳಿವೆ ಪಿಯು ಪಾಠದ ಜೊತೆ ಜೊತೆಗೆಯೇ ನೀಟ್, ಜೆಇಇ ಪರೀಕ್ಷೆಗೂ ತರಬೇತಿ ನೀಡಲಾಗುವುದು. ಉತ್ತಮ ಉಪನ್ಯಾಸಕ ವರ್ಗದವರಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಮಂಡಳಿ ಖಜಂಚಿ ಬಿ.ಜೆ.ಸುನೀತಾ ದೇವಿ, ಉಪನ್ಯಾಸಕರಾದ ಕಣ್ಣನ್, ಪ್ರಕಾಶ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...