Thursday, March 19, 2026
Thursday, March 19, 2026

D.K.Shivakumar ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ. ನಿಖಿಲ್ ಅಥವಾ ಯೋಗೇಶ್ವರ್ ಕಣಕ್ಕೆ?

Date:

D.K.Shivakumar ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ಸುಕರಾಗಿದ್ದಾರೆಂಬ ಸುಳಿವು ಸಿಗುತ್ತಿದ್ದಂತೆಯೇ ಇತ್ತ ಮೈತ್ರಿ ಪಕ್ಷಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿಯೂ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆಗಳು ಆರಂಭವಾಗಿವೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತಾಡಿದ ಕೇಂದ್ರ ಸಚಿವರ ಕುಮಾರಸ್ವಾಮಿಯವರು, ಬೆಂಗಳೂರು ಗ್ರಾಮಾಂತರ ಲೋಕಸಭೆಯ ಫಲಿತಾಂಶವನ್ನು ಪುನರಾವರ್ತಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕೈಜೋಡಿಸುವುದಾಗಿ ಹೇಳಿದರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕುಮಾರಸ್ವಾಮಿಯವರ ಬಾವ ಡಾ ಸಿಎನ್ ಮಂಜುನಾಥ್ ಅವರು, ಡಿಕೆ.ಶಿವಕುಮಾರ್ ಅವರ ಕಿರಿಯ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದರು.
D.K.Shivakumar ಕುಮಾರಸ್ವಾಮಿ ಅವರು ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕ ರಾಜಕೀಯದ ಕುರಿತು ಚರ್ಚೆ ನಡೆಸಿರುವುದಾಗಿ ಹೇಳಿದ್ದು, ಉಭಯ ನಾಯಕರ ಮಾತುಕತೆ ವೇಳೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಅಮಿತ್ ಶಾ ಸೂಚಿಸುತ್ತಾರೆಯೇ ಎಂಬುದರ ಕುರಿತು ಕುತೂಹಲಗಳು ಮೂಡತೊಡಗಿದೆ.
ಡಿಕೆ.ಶಿವಕುಮಾರ್ ಅವರು ಡಿಸಿಎಂ ಆದ ಬಳಿಕ ಕಳೆದ ಒಂದೂವರೆ ವರ್ಷದಿಂದ ಅವರು ಚನ್ನಪಟ್ಟಣಕ್ಕೆ ಹೋಗಿಲ್ಲ. ಈಗ ಕ್ಷೇತ್ರದ ಬಗ್ಗೆ ಅನುಕಂಪ ತೋರುತ್ತಿದ್ದಾರೆ. ಇದುವರೆಗೂ ಚನ್ನಪಟ್ಟಣವನ್ನು ಅಭಿವೃದ್ಧಿಪಡಿಸದಂತೆ ಅವರನ್ನು ಯಾರು ತಡೆದಿದ್ದರು? ಸಂಸದರಾಗಿ ಶಿವಕುಮಾರ್ ಅವರ ಸಹೋದರನ ಕೊಡುಗೆ ಏನಿತ್ತು? ನಮ್ಮ ಕಡೆಯಿಂದ ಯಾರು ಅಭ್ಯರ್ಥಿ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆ.ಶಿವಕುಮಾರ್ ಅವರು ಸ್ಪರ್ಧಿಸಿದ್ದೇ ಆದರೆ, ಇದು ಅವರ ರಾಜಕೀಯ ಜೀವನದ ಅಂತ್ಯವಾಗಲಿದೆ ಎಂದು ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಅವರು ಹೇಳಿದ್ದು, ಈ ಮೂಲಕ ತಾವೂ ಕೂಡ ಟಿಕೆಟ್ ಆಕಾಂಕ್ಷಿ ಎಂಬುದನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...