Monday, May 4, 2026
Monday, May 4, 2026

Actor Darshan ದರ್ಶನ್ ಗೆ ಊಟ ತಂದ ಪತ್ನಿ ವಿಜಯಲಕ್ಷ್ಮಿ , ಮೀಡಿಯ ಮಂದಿ‌ ಕಂಡು ‌ಹಾಗೇ ವಾಪಸ್!

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್‌ ಇಂದು ಊಟ ತಂದಿದ್ದಾರೆ. ಇಂದು ವಿಜಯಲಕ್ಷ್ಮಿ ಪುತ್ರ ವಿನೀಶ್‌ ಜೊತೆಗೆ ಕಿಯಾ ಕಾರಿನಲ್ಲಿ ಪರಪ್ಪನ ಅಗ್ರಹಾರಕ್ಕೆ ತೆರಳಿ ಪತಿಗೆ ಊಟ ಕೊಂಡೊಯ್ದಿದ್ದಾರೆ. ಆದರೆ ಮಾಧ್ಯಮದವರನ್ನ ಕಂಡು ವಿಜಯಲಕ್ಷ್ಮಿ ವಾಪಸ್ ಹೊರಟಿದ್ದಾರೆ.
ದರ್ಶನ್‌ ಬಂಧನವಾಗಿ 9 ದಿನಗಳ ಬಳಿಕ ವಿಜಯಲಕ್ಷ್ಮಿ ಜೂನ್‌ 19 ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯನ್ನು ಮೊದಲ ಬಾರಿ ಭೇಟಿಯಾಗಿದ್ದರು. ಬಳಿಕ ನ್ಯಾಯಾಂಗ ಬಂಧನವಾಗಿತ್ತು
ಪತಿ ದರ್ಶನ್‌ ಕುರಿತಾಗಿ ಆರೋಪಗಳು ಕೇಳಿಬರುತ್ತಿದ್ದಂತೆ ವಿಜಯಲಕ್ಷ್ಮಿ ಮನನೊಂದು ದರ್ಶನ್‌ ಅವರನ್ನು ಅನ್‌ ಫಾಲೊ ಮಾಡಿ ಬಳಿಕ ಸೋಶಿಯಲ್‌ ಮೀಡಿಯಾಗೆ ಗುಡ್‌ಬೈ ಹೇಳಿದ್ದರು. ಬಳಿಕ ಮುನಿಸು ಮರೆತು ಮತ್ತೆ ಇನ್ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
Actor Darshan ಈ ಹಿಂದೆ 2011 ರಲ್ಲಿ ದರ್ಶನ್‌ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ತೀವ್ರವಾಗಿ ಗಾಯಗೊಂಡಿದ್ದರೂ ವಿಜಯಲಕ್ಷ್ಮಿ ಬಳಿಕ ಪತಿಯ ವಿರುದ್ಧದ ದೂರನ್ನು ಹಿಂಪಡೆದು, ಸಂಧಾನ ಮಾಡಿಕೊಂಡು ಸಂಸಾರ ಮುಂದುವರಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...