Friday, March 20, 2026
Friday, March 20, 2026

World Blood Donor Day ಯುವಜನರು ರಕ್ತದಾನದಂತಹ ಮಹತ್ಕಾರ್ಯಕ್ಕೆ ಕೈ ಜೋಡಿಸಬೇಕು-ಡಾ.ಕೆ.ಎಲ್.ಅರವಿಂದ

Date:

World Blood Donor Day ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ಎನ್.ಎಂ. ಕಾಲೇಜಿನ ಗ್ರಂಥಾಲದ ಆವರಣದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವರೆಡ್ ಕ್ರಾಸ್ ಘಟಕಗಳ ವತಿಯಿಂದ
ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಲ್.ಅರವಿಂದ ಅವರು ನಮ್ಮ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ ಹಾಗೂ ರಕ್ತದ ಗುಂಪು ತಪಾಸಣೆ ಸೇರಿದಂತೆ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ.
ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ, ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ ಬೇಡಿಕೆ ಇದೆ.

ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡುತ್ತಾ ರಕ್ತದಾನದಿಂದ ಹೃದಯಾಘಾತ ಕಡಿಮೆ ಆಗುವುದರಜೊತೆಗೆ ಹಾಗೂ ದೇಹದಲ್ಲಿ ರಕ್ತದಾನದಿಂದ ಕೊಬ್ಬಿನಾಂಶ ಹೊರಹೋಗುವುದರಿಂದ ಸದಾ ಲವಲವಿಕೆಯಿಂದ ಇರುವುದರಜೊತೆಗೆ ದೀರ್ಘಾಷ್ಯುವುಳ್ಳವರಾಗಿರುತ್ತಾರೆ.

ಜಿಲ್ಲೆಯಲ್ಲಿ ರಕ್ತದಕೊರತೆ ತುಂಬಾ ಹೆಚ್ಚಾಗಿದ್ದು ಇದನ್ನು ನೀಗಿಸಲು ಯುವಕರು ರಕ್ತದಾನ ಮಾಡುವುದರಲ್ಲಿ ಮುಂದಾಗಬೇಕು ಹಾಗೂ ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ರಕ್ತದ ಗುಂಪು ತಪಾಸಣೆ ಹಾಗೂ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

World Blood Donor Day ಈ ರಕ್ತದಾನ ಶಿಬಿರದಲ್ಲಿ 115 ಕ್ಕೂ ಹೆಚ್ಚುಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ಎನ್.ಎಸ್.ಎಸ್. ಘಟಕದ ಲಕ್ಷ್ಮಣ. ಕೆ, ಮಂಜುನಾಥ. ಕೆ, ಯುವ ರೆಡ್‌ಕ್ರಾಸ್‌ ಘಟಕದ ಡಾ. ನಾಗರಾಜ. ಕೆ. ಎಸ್, ಉಪನ್ಯಾಸಕರಾದ ಡಾ. ಮುಕುಂದ ಎಸ್., ಡಾ. ಪ್ರಶಿತ್ ಕೇಕುಡ ಟಿ.ಆರ್., ಸಂಗೀದಾ ಬಾನು, ನಂದನ್, ಅಂಕಿತ್, ಶಿವಮೊಗ್ಗದ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಗಿರೀಶ್. ಆರ್, ಜಿ.ವಿಜಯಕುಮಾರ್, ಉಮಾ ಸೋಮಶೇಖರ್. ನಂದಿತಾ ಗೀತ ಹಾಗೂ ಎನ್.ಎಸ್.ಎಸ್.ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...