Thursday, March 19, 2026
Thursday, March 19, 2026

Veerabhadreshwara Temple ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ಅವರಿಂದ ಕಡ್ತೂರು ಶ್ರೀವೀರಭದ್ರೇಶ್ವರ ದೇಗುಲಕ್ಕೆ ಅನುದಾನ ಮಂಜೂರು

Date:

Veerabhadreshwara Temple ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ ಕೇಸಲೂರು ಗ್ರಾಮದ ಒಂದು ಸಣ್ಣ ಹಳ್ಳಿಯಾದ ಕಡ್ತೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ರವರು ಸಾರಿಗೆ ಮತ್ತು ಮುಜರಾಯಿ ಸಚಿವರಿಗೆ ಅನುದಾನ ನೀಡಲು ಕೋರಿದ್ದು, ಮುಜರಾಯಿ ಇಲಾಖೆಯಿಂದ ರೂ.5 ಲಕ್ಷ ಸಹಾಯಧನ ಮಂಜೂರಾಗಿರುತ್ತದೆ.

ಆರತಿ ಕೃಷ್ಣರವರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ ಸರ್ಕಾರದ ವತಿಯಿಂದ ಅನುದಾನ ಕೋರಿರುತ್ತಾರೆ. ಮಂಜೂರಾಗದ ಕಾರಣ ಗ್ರಾಮಸ್ಥರು ದೇಣಿಗೆ ಸಂಗ್ರಹಿಸಿ ಜೀರ್ಣೋದ್ದಾರ ಕಾರ್ಯ ಮಾಡಿರುತ್ತಾರೆ.

Veerabhadreshwara Temple ಮುಂದುವರೆದು ದೇವಸ್ಥಾನದ ಆವರಣಕ್ಕೆ ಇಂಟರ್‍ಲಾಕ್, ಟೈಲ್‌ಗಳ ಅವಶ್ಯಕತೆ ಇದ್ದು ಅಂದಾಜು
ರೂ.5 ಲಕ್ಷ ಸಹಾಯ ಧನವನ್ನು ಸರ್ಕಾರದ ವತಿಯಿಂದ ನೀಡಲು ಉಪಾಧ್ಯಕ್ಷರನ್ನು ಕೋರಿರುತ್ತಾರೆ. ಕೋರಿಕೆಗೆ ಸ್ಪಂದಿಸಿದ ಡಾ.ಆರತಿ ಕೃಷ್ಣರವರು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಇವರಿಗೆ ಸದರಿ ಅನುದಾನ ನೀಡಲು ಕೋರಿದ್ದು ಮುಜರಾಯಿ ಇಲಾಖೆ ವತಿಯಿಂದ ರೂ. 5 ಲಕ್ಷಗಳನ್ನು ಮಂಜೂರು ಮಾಡಿರುತ್ತಾರೆ, ಮತ್ತು ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗುವುದು ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...