Monday, December 15, 2025
Monday, December 15, 2025

Veerabhadreshwara Temple ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ಅವರಿಂದ ಕಡ್ತೂರು ಶ್ರೀವೀರಭದ್ರೇಶ್ವರ ದೇಗುಲಕ್ಕೆ ಅನುದಾನ ಮಂಜೂರು

Date:

Veerabhadreshwara Temple ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ ಕೇಸಲೂರು ಗ್ರಾಮದ ಒಂದು ಸಣ್ಣ ಹಳ್ಳಿಯಾದ ಕಡ್ತೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ರವರು ಸಾರಿಗೆ ಮತ್ತು ಮುಜರಾಯಿ ಸಚಿವರಿಗೆ ಅನುದಾನ ನೀಡಲು ಕೋರಿದ್ದು, ಮುಜರಾಯಿ ಇಲಾಖೆಯಿಂದ ರೂ.5 ಲಕ್ಷ ಸಹಾಯಧನ ಮಂಜೂರಾಗಿರುತ್ತದೆ.

ಆರತಿ ಕೃಷ್ಣರವರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ ಸರ್ಕಾರದ ವತಿಯಿಂದ ಅನುದಾನ ಕೋರಿರುತ್ತಾರೆ. ಮಂಜೂರಾಗದ ಕಾರಣ ಗ್ರಾಮಸ್ಥರು ದೇಣಿಗೆ ಸಂಗ್ರಹಿಸಿ ಜೀರ್ಣೋದ್ದಾರ ಕಾರ್ಯ ಮಾಡಿರುತ್ತಾರೆ.

Veerabhadreshwara Temple ಮುಂದುವರೆದು ದೇವಸ್ಥಾನದ ಆವರಣಕ್ಕೆ ಇಂಟರ್‍ಲಾಕ್, ಟೈಲ್‌ಗಳ ಅವಶ್ಯಕತೆ ಇದ್ದು ಅಂದಾಜು
ರೂ.5 ಲಕ್ಷ ಸಹಾಯ ಧನವನ್ನು ಸರ್ಕಾರದ ವತಿಯಿಂದ ನೀಡಲು ಉಪಾಧ್ಯಕ್ಷರನ್ನು ಕೋರಿರುತ್ತಾರೆ. ಕೋರಿಕೆಗೆ ಸ್ಪಂದಿಸಿದ ಡಾ.ಆರತಿ ಕೃಷ್ಣರವರು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಇವರಿಗೆ ಸದರಿ ಅನುದಾನ ನೀಡಲು ಕೋರಿದ್ದು ಮುಜರಾಯಿ ಇಲಾಖೆ ವತಿಯಿಂದ ರೂ. 5 ಲಕ್ಷಗಳನ್ನು ಮಂಜೂರು ಮಾಡಿರುತ್ತಾರೆ, ಮತ್ತು ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗುವುದು ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...