Tuesday, February 3, 2026
Tuesday, February 3, 2026

Horticulture Department ತೋಟಗಾರಿಕಾ ಮಿಷನ್ ಯೋಜನೆ 2024-25 ಇದರ ಲಾಭ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Date:

Horticulture Department ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ನೀರು ಸಂರಕ್ಷಣಾ ಘಟಕಗಳಾದ ವೈಯುಕ್ತಿ ಕೃಷಿ ಹೊಂಡ ಮತ್ತು ಸಮುದಾಯ ಕೃಷಿಹೊಂಡ ನಿರ್ಮಾಣ, ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ನೆಲಹೊದಿಕೆ (ಪ್ಲಾಸ್ಟಿಕ್ ಮಲ್ಚಿಂಗ್), ಮಿನಿ ಟ್ರ್ಯಾಕ್ಟರ್ ಮತ್ತು ಮಾನವ ಸಂಪನ್ಮೂಲ ಕಾರ್ಯಕ್ರಮಗಳಾದ ರೈತರಿಗೆ ತರಬೇತಿ ಮತ್ತು ಶೈಕ್ಷಣಿಕ ಪ್ರವಾಸ ಇತ್ಯಾದಿ ಕಾರ್ಯಕ್ರಮಗಳ ಸೌಲಭ್ಯವನ್ನು ಪಡೆಯಬಹುದಾಗಿದೆ.

ಕೃಷಿ ಯಾಂತ್ರೀಕರಣ ಉಪ ಅಭಿಯನಾ (ಎಸ್.ಎಂ.ಎ.ಎಂ) ಕಾರ್ಯಕ್ರಮದಡಿ ಅಡಿಕೆ ಸುಲಿಯುವ ಯಂತ್ರ, ಅಡಿಕೆ ಗೊರಬಲು ಪಾಲಿಷತ್, ಅಡಿಕೆ ದೋಟಿ ಇತ್ಯಾದಿ ಯಂತ್ರಗಳಿಗೆ ಸಹಾಯಧನ ಲಭ್ಯವಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15 ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Horticulture Department ಹೆಚ್ಚಿನ ಮಾಹಿತಿಗಾಗಿ ಅಯಾ ತಾಲೂಕು ತೋಟಗಾರಿಕೆ ಕಚೇರಿ/ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...