Wednesday, October 2, 2024
Wednesday, October 2, 2024

Dr. Lata Nagendra ಮಕ್ಕಳಿಂದ ವೃದ್ಧರವರೆಗೆ ಒತ್ತಡದಲ್ಲಿ ಬದುಕುತ್ತಿದ್ದೇವೆ. ನಾವು ದೇಹ & ಮಾನಸಿಕ ಆರೋಗ್ಯ ಗಮನಿಸುತ್ತಿಲ್ಲ- ಡಾ.ಲತಾ ನಾಗೇಂದ್ರ

Date:

ನಿಮ್ಮ ಮನೆಯ ಚಿಕ್ಕ ಮಕ್ಕಳ ಆರೋಗ್ಯದ ಕುರಿತಾಗಿ ಯಾವುದೇ ರೀತಿಯಲ್ಲೂ ಪೋಷಕರು ನಿರ್ಲಕ್ಷ ಮಾಡಬಾರದು ಎಂದು ಎನ್’ಇಎಸ್ ಕಾರ್ಯದರ್ಶಿ ಸಿ.ಎನ್. ನಾಗರಾಜ್ ಸಲಹೆ ನೀಡಿದರು.

ಶಿವಮೊಗ್ಗದ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ಶಿಕ್ಷಕರಿಗೆ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಇಂದಿನ ಹವಾಮಾನ, ಜೀವನ ಶೈಲಿಗಳು ಮೊದಲಿನಂತೆ ಇಲ್ಲ. ಎಲ್ಲವೂ ಬದಲಾವಣೆಯಾಗಿದ್ದು, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಎಲ್ಲರೂ ಮಾಡಿಸಿಕೊಳ್ಳುವುದು ಅಗತ್ಯ. ಅನಾರೋಗ್ಯಗಳು ನಮ್ಮತ್ತ ಸುಳಿಯದಂತೆ ಜೀವನ ಶೈಲಿ, ಆಹಾರ ಶೈಲಿಗಳನ್ನು ಬದಲಾವಣೆ ಮಾಡಿಕೊಳ್ಳುವ ಜೊತೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಕಿ ಡಾ|| ಲತಾ ನಾಗೇಂದ್ರ ಮಾತನಾಡಿ, ಇತ್ತೀಚೀನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರಿಗೆ ಎ?? ವಯೋಮಾನದವರು ಒತ್ತಡದಲ್ಲಿ ಬದುಕುತ್ತಿದ್ದೇವೆ.. ನಮ್ಮ ದೇಹ ಹಾಗೂ ಮಾನಸಿನ ಆರೋಗ್ಯದ ಬಗ್ಗೆ ಗಮನ ಹರಿಸುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಸ್ತನ ಕ್ಯಾನ್ಸರ್ ತಡೆಯಲು ನಿಯಮಿತ ತಪಾಸಣೆ, ಪರೀಕ್ಷೆ, ಸೂಕ್ತ ಮುಂಜಾಗ್ರತೆ ವಹಿಸಬೇಕು. ಇದಕ್ಕಾಗಿ ವೈದ್ಯರನ್ನು ನಿಯಮಿತವಾಗಿ ಭೇಟಿಯಾಗಿ ಪರೀಕ್ಷಿಸಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ನವೀನಾ ಪಾಯಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸನ್ ಎಚ್’ಒಡಿ ಡಾ|| ಡಿ.ಆರ್. ಬಾಲು, ಡಾ| ಭಾಗ್ಯಶ್ರೀ, ಡಾ|| ಅನುಪಮಾ, ಡಾ|| ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...