Tuesday, December 16, 2025
Tuesday, December 16, 2025

Dr. Lata Nagendra ಮಕ್ಕಳಿಂದ ವೃದ್ಧರವರೆಗೆ ಒತ್ತಡದಲ್ಲಿ ಬದುಕುತ್ತಿದ್ದೇವೆ. ನಾವು ದೇಹ & ಮಾನಸಿಕ ಆರೋಗ್ಯ ಗಮನಿಸುತ್ತಿಲ್ಲ- ಡಾ.ಲತಾ ನಾಗೇಂದ್ರ

Date:

ನಿಮ್ಮ ಮನೆಯ ಚಿಕ್ಕ ಮಕ್ಕಳ ಆರೋಗ್ಯದ ಕುರಿತಾಗಿ ಯಾವುದೇ ರೀತಿಯಲ್ಲೂ ಪೋಷಕರು ನಿರ್ಲಕ್ಷ ಮಾಡಬಾರದು ಎಂದು ಎನ್’ಇಎಸ್ ಕಾರ್ಯದರ್ಶಿ ಸಿ.ಎನ್. ನಾಗರಾಜ್ ಸಲಹೆ ನೀಡಿದರು.

ಶಿವಮೊಗ್ಗದ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ಶಿಕ್ಷಕರಿಗೆ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಇಂದಿನ ಹವಾಮಾನ, ಜೀವನ ಶೈಲಿಗಳು ಮೊದಲಿನಂತೆ ಇಲ್ಲ. ಎಲ್ಲವೂ ಬದಲಾವಣೆಯಾಗಿದ್ದು, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಎಲ್ಲರೂ ಮಾಡಿಸಿಕೊಳ್ಳುವುದು ಅಗತ್ಯ. ಅನಾರೋಗ್ಯಗಳು ನಮ್ಮತ್ತ ಸುಳಿಯದಂತೆ ಜೀವನ ಶೈಲಿ, ಆಹಾರ ಶೈಲಿಗಳನ್ನು ಬದಲಾವಣೆ ಮಾಡಿಕೊಳ್ಳುವ ಜೊತೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಕಿ ಡಾ|| ಲತಾ ನಾಗೇಂದ್ರ ಮಾತನಾಡಿ, ಇತ್ತೀಚೀನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರಿಗೆ ಎ?? ವಯೋಮಾನದವರು ಒತ್ತಡದಲ್ಲಿ ಬದುಕುತ್ತಿದ್ದೇವೆ.. ನಮ್ಮ ದೇಹ ಹಾಗೂ ಮಾನಸಿನ ಆರೋಗ್ಯದ ಬಗ್ಗೆ ಗಮನ ಹರಿಸುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಸ್ತನ ಕ್ಯಾನ್ಸರ್ ತಡೆಯಲು ನಿಯಮಿತ ತಪಾಸಣೆ, ಪರೀಕ್ಷೆ, ಸೂಕ್ತ ಮುಂಜಾಗ್ರತೆ ವಹಿಸಬೇಕು. ಇದಕ್ಕಾಗಿ ವೈದ್ಯರನ್ನು ನಿಯಮಿತವಾಗಿ ಭೇಟಿಯಾಗಿ ಪರೀಕ್ಷಿಸಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ನವೀನಾ ಪಾಯಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸನ್ ಎಚ್’ಒಡಿ ಡಾ|| ಡಿ.ಆರ್. ಬಾಲು, ಡಾ| ಭಾಗ್ಯಶ್ರೀ, ಡಾ|| ಅನುಪಮಾ, ಡಾ|| ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...