Sunday, May 17, 2026
Sunday, May 17, 2026

G.K. Mithun Kumar ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಾದರೆ ಜೀವನ ಪೂರ್ತಾ ಸಾಮಾನ್ಯ ಜ್ಞಾನದ ಲಾಭ- ಜಿ.ಕೆ. ಮಿಥುನ್ ಕುಮಾರ್

Date:

G.K. Mithun Kumar ಜೀವನ ನಡೆಸಲು ಪ್ರಾಪಂಚಿಕ ಜ್ಞಾನ ಮುಖ್ಯವಾಗಿದ್ದು, ಒಂದು ಬಾರಿಯಾದರೂ ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿದ್ದೇ ಆದರೆ ಸಾಮಾನ್ಯ ಜ್ಞಾನವು ನಿಮಗೆ ಜೀವನದುದ್ದಕ್ಕೂ ಉಪಯೋಗಕ್ಕೆ ಬರಲಿದೆ. ಕೇಂದ್ರ ಮತ್ತು ರಾಜ್ಯ ಲೋಕ ಸೇವ ಆಯೋಗವು ನಡೆಸುವ ಪರೀಕ್ಷೆಯಲ್ಲಿ ಕೃಷಿ ವಿಜ್ಞಾನ ವಿಧ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಜಿ ಕೆ ಮಿಥುನ್‌ಕುಮಾರ್ ಹೇಳಿದರು.

ಅವರು ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನದ ವಿಶ್ವವಿದ್ಯಾಲಯದಲ್ಲಿ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಪ್ರಚಲಿತ ವಿದ್ಯಮಾನಗಳು, ಸರ್ಕಾರದ ಆಡಳಿತ ವೈಖರಿ, ಸುತ್ತೋಲೆ, ಆದೇಶಗಳ ಬಗ್ಗೆ, ಆರ್ಥಿಕತೆ, ರಾಜಕೀಯ, ಭೌಗೋಳಿಕ ವಿಷಯದಲ್ಲಿ ಜ್ಞಾನ ಪಡೆದುಕೊಳ್ಳಬೇಕು. ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇದರಿಂದ ಸುಲಭವಾಗಿ ಯಶಸ್ಸು ಕಾಣಲು ಸಾಧ್ಯವಿದೆ ಎಂದ ಅವರು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೆಚ್ಚಿನ ಸಂಖ್ಯೆಯ ಪರೀಕ್ಷಾರ್ಥಿಗಳು ತೆಗೆದುಕೊಳ್ಳುತ್ತಾರಾದರೂ ಸಂಪೂರ್ಣವಾಗಿ ತಯಾರಿ ನಡೆಸಿದವರಿಗೆ ಮಾತ್ರ ಯಶಸ್ಸು ದೊರೆಯಲಿದೆ. ಸತತ ಪ್ರಯತ್ನಕ್ಕೆ ಖಚಿತವಾಗಿ ಫಲ ದೊರೆಯುತ್ತದೆ ಎಂದರು.

G.K. Mithun Kumar ಪ್ರಸ್ತುತ ಆನ್ ಲೈನ್ ಮುಖಾಂತರ ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತಯಾರಿ ನಡೆಸಲು ಸಹಾಯವಾಗುವ ಮಾಹಿತಿ ಕೂಡ ಸುಲಭವಾಗಿ ದೊರೆಯಲಿದೆ. ಇದನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಕರೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...