Thursday, March 19, 2026
Thursday, March 19, 2026

Shivamogga News ವಿಐಎಸ್ಎಲ್ ಸಮಸ್ಯೆ ಅರಿತು ಮುಂದಿನ ಕ್ರಮ: ಹೆಚ್.ಡಿ.ಕೆ

Date:

ಶಿವಮೊಗ್ಗ : ಮಾಜಿ ಕೇಂದ್ರ ಸಚಿವ ಜಯರಾಮ್ ರಮೇಶ್ ಭಾರತದ ಐದು ಕಬ್ಬಿಣ ಕಾರ್ಖಾನೆ ಬಗ್ಗೆ ನನ್ನ ಮುಂದೆ ಐದು ಪ್ರಶ್ನೆ ಇಟ್ಟಿದ್ದರು. ಆ ಪ್ರಶ್ನೆಗೆ ಮಾಹಿತಿ ಪಡೆಯಲು ಭದ್ರಾವತಿ ವಿಐಎಸ್ ಎಲ್ ಭದ್ರಾವತಿಗೆ ಭೇಟಿ ನೀಡಿರುವುದಾಗಿ ಕೇಂದ್ರ ಬೃಹತ್ ಮತ್ತು ಉಕ್ಕು ಸಚಿವ ಹೆಚ್ ಡಿ‌ ಕುಮಾರ ಸ್ವಾಮಿ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾರ್ಮಿಕರ ಬದುಕು, ಕಾರ್ಖಾನೆ ಉಳಿಸುವ ಕುರಿತು ಏನು ಮಾಡಬಹುದು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸುತ್ತೇನೆ. ಮಾಹಿತಿ ಪಡೆದು ಮುಂದಿನ ದಿನಗಳ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಆತ್ಮನಿರ್ಭರ್ ಯೋಜನೆ, ಮೇಕ್ ಇನ್ ಇಂಡಿಯಾ ಮತ್ತು ಸ್ಟೀಲ್ ಅಥಾರಿಟಿ ಇಂಡಿಯಾದ ಕಾನ್ಸೆಪ್ಟ್ ಮತ್ತು 2017 ರ ಪಾಲಿಸಿಯಂತೆ ಮೋದಿಯವರ ಕನಸನ್ನ ನನಸಾಗಿಸಲು ಕಾರ್ಖಾನೆಗೆ ಭೇಟಿ ನೀಡಿದ್ದಾಗಿ ಹೇಳಿದರು.
2017 ರ ಪಾಲಿಸಿ ಪ್ರಕಾರ 2030 ರ ವೇಳೆಗೆ ದೇಶದಲ್ಲಿ 300 ಮಿಲಿಯನ್ ಟನ್ ಕಬ್ಬಿಣ ತಯಾರಿಕೆಯ ಗುರಿ ಹೊಂದಿದ್ದೇವೆ. ಗುರಿ ಮುಟ್ಟಲು ಹಲವು ಯೋಜನೆಗಳನ್ನು ಆರಂಭಿಸಿದ್ದೇವೆ. ಈ ಹಿನ್ನಲೆಯಲ್ಲಿ ಚಿಂತನೆ ನಡೆಸುವುದಾಗಿ ಹೇಳಿದರು.
ಡಿಸ್ ಇನ್ ವೆಸ್ಟ್ ಮೆಂಟ್, ಕ್ಲೋಸಿಂಗ್ ನಿಂದ ಹೊರಗೆ ತರಬೇಕು ಎಂಬುದು ಕಾರ್ಮಿಕರ ಒತ್ತಾಸೆ, ಕಾರ್ಮಿಕರಿಗೆ ಈಗ 13 ದಿನ ಕೆಲಸವಿದೆ . ಅದನ್ನು 26 ಕ್ಕೆ ಏರಿಸಬೇಕು ಎಂಬ ಆಗ್ರಹವಿದೆ. ಪಾರ್ಲಿಮೆಂಟ್ ನಡೆಯುತ್ತಿದೆ. ನಾನು ಈ ಬಗ್ಗೆ ಸಾರ್ವಜನಿಕ ಚರ್ಚೆ ಮಾಡಲು ಸಾಧ್ಯವಿಲ್ಲ.
ಆದರೆ ಕಾರ್ಖಾನೆ ಉಳಿವಿನ ಬಗ್ಗೆ ಸಾಧಕ ಬಾಧಕವನ್ನು ಕ್ರೋಡೀಕರಿಸಿ ಮುಂದಿನ ದಿನಗಳಲ್ಲಿ ಏನು ಮಾಡಬಹುದೋ ಅದನ್ನು ಮಾಡುತ್ತೇನೆ ಎಂಬ ಭರವಸೆ ನೀಡಿದರು.
ಸಂಡೂರಿನ ರಮಣದುರ್ಗದಲ್ಲಿ ಮೈನ್ಸ್ ಗೆ ಅವಕಾಶ ನೀಡಿದ್ದರೂ ಆರಂಭವಾಗಿಲ್ಲ. ಈ ಬಗ್ಗೆ ಈಗ ಆರಂಭದ ಹೆಜ್ಜೆ ಇಟ್ಟಿದ್ದೇವೆ. ಇವೆಲ್ಲದಕ್ಕೂ ಉತ್ತರ ಮುಂದಿನ ದಿನಗಳಲ್ಲಿ ಸಿಗುತ್ತದೆ.
ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಿಎಂ ಬದಲಾವಣೆ ವಿಚಾರ ನಮ್ಮ ಪಕ್ಷಕ್ಕೆ ಸೇರಿಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಮಸ್ಯೆ. ಅದನ್ನು ಅವರು‌ ಮಾತನಾಡುತ್ತಾರೆ ಎಂದರು.‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...