Tuesday, February 3, 2026
Tuesday, February 3, 2026

Shivamogga News ಆರೋಗ್ಯ ಕಾಪಾಡಿಕೊಳ್ಳುವುದು ಆದ್ಯ ಕರ್ತವ್ಯರಾಮಕೃಷ್ಣ ವಿದ್ಯಾನಿಕೇತನದ ವೈದ್ಯರ ದಿನಾಚರಣೆಯಲ್ಲಿ ಡಾ.ಧನಂಜಯಸರ್ಜಿ

Date:

ಶಿವಮೊಗ್ಗ, ಜು.೦೧:
ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಬದುಕಲ್ಲಿ ಸಾಧನೆ ಸಾಧ್ಯವಾಗುತ್ತದೆ. ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಳಕಳಿ ಹಂದಬೇಕು. ಮಕ್ಕಳು ವಿಶೇಷವಾಗಿ ದುಷ್ಪರಿಣಾಮ ಉಂಟು ಮಾಡುವ ಜಂಕ್‌ಫುಡ್‌ಗಳನ್ನು ತ್ಯಜಿಸಬೇಕು ಎಂದು ವಿಧಾನ ಪರಿಷತ್ ಶಾಸಕ, ಸರ್ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ತಿಳಿಸಿದರು.
ಅವರು ಇಂದು ಬೆಳಗ್ಗೆ ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಓದಿನ ಹಾಗೂ ಕಲಿಕೆಯ ಕನಸನ್ನು ನನಸಾಗಿಸಲು ಸತತ ಪ್ರಯತ್ನಗಳ ಜೊತೆಗೆ ಆರೋಗ್ಯ ಅತಿಮುಖ್ಯ ಇದರ ಜೊತೆಗೆ ಶಿಕ್ಷಕರು, ಪೋಷಕರು ಗಮನಹರಿಸಬೇಕು ಎಂದರು.
ರಾಮಕೃಷ್ಣ ವಿದ್ಯಾನಿಕೇತನದ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಾವು ಪೂಜ್ಯ ತಂದೆ-ತಾಯಿ ಶಿಕ್ಷಕರಂತೆ ವೈದ್ಯರನ್ನು ಸಹ ಅತ್ಯಂತ ಪ್ರೀತಿಯಿಂದ ಗೌರವಿಸಬೇಕು. ನಮ್ಮ ಜೀವ ರಕ್ಷಕರಾದ ವೈದ್ಯರ ಬಗ್ಗೆ ನಾವು ಗೌರವವನ್ನು ಸೂಚಿಸುವುದು ಆದ್ಯ ಕರ್ತವ್ಯವಾಗಿದೆ. ಆರೋಗ್ಯದಾತ ವೈದ್ಯ ಸಮೂಹಕ್ಕೆ ನಮ್ಮ ರಾಮಕೃಷ್ಣ ವಿದ್ಯಾಸಂಸ್ಥೆಯಿಂದ ಅಭಿನಂದನೆಗಳು ಎಂದರು.
ಇದೇ ಸಂದರ್ಭದಲ್ಲಿ ಡಾ.ಧನಂಜಯ ಸರ್ಜಿ ಅವರನ್ನು ರಾಮಕೃಷ್ಣ ವಿದ್ಯಾಸಂಸ್ಥೆ ಆತ್ಮೀಯವಾಗಿ ಸನ್ಮಾನಿಸಲಾಯಿತ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...