Sunday, August 2, 2026
Sunday, August 2, 2026

Shivamogga News ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಇಲಾಖೆಯ ವಿವಿಧ ಸಾಲ ಸೌಲಭ್ಯಗಳಿಗೆ ಆಯ್ಕೆಯಾದಂತಹ ಫಲಾನುಭವಿಗಳಿಗೆ ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಚೆಕ್ಕನ್ನು ವಿತರಿಸಿದರು.

Date:

  1. ಶ್ರಮಶಕ್ತಿ ಸಾಲ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಲಕಸುಬುದಾರರಿಗೆ 50000ರೂ ಸಾಲವನ್ನು ನೀಡಲಾಗುತ್ತಿತ್ತು, ಇದರಲ್ಲಿ 25000ರೂ ಸಾಲ ಮತ್ತು 25000ರೂ ಸಹಾಯಧನವನ್ನು ನೀಡಲಾಗುತ್ತಿದೆ. ಈ ಯೋಜನೆ ಅಡಿಯಲ್ಲಿ ಒಟ್ಟಾರು 2317 ಅರ್ಜಿಗಳು ಸ್ವೀಕರಿಸಲಾಗಿದ್ದು ಈ ಪೈಕಿ ಆಯ್ಕೆಯಾದ 5 ಜನರಿಗೆ ಸಾಲದ ಚೆಕ್ಕನ್ನು ವಿತರಿಸಲಾಯಿತು.
  2. ಶ್ರಮಶಕ್ತಿ ಸಾಲ (ವಿಶೇಷ ಮಹಿಳೆಯರಿಗಾಗಿ)ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿಧವೆ/ ವಿಚ್ಛೇದಿತ/ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ 50000ರೂ ಸಾಲವನ್ನು ಶೇಕಡ 4% ಬಡ್ಡಿ ದರದಲ್ಲಿ ನೀಡಲಾಗಿದ್ದು, ಇದರಲ್ಲಿ 25000ರೂ ಸಾಲ ಮತ್ತು 25000ರೂ ಸಹಾಯಧನವನ್ನು ನೀಡಲಾಗುತ್ತಿದೆ. ಈ ಯೋಜನೆ ಅಡಿಯಲ್ಲಿ ಒಟ್ಟಾರು 169 ಅರ್ಜಿಗಳು ಸ್ವೀಕರಿಸಲಾಗಿದ್ದು ಈ ಪೈಕಿ ಆಯ್ಕೆಯಾದ 6 ಜನರಿಗೆ ಸಾಲದ ಚೆಕ್ಕನ್ನು ವಿತರಿಸಲಾಯಿತು.
  3. ವೃತ್ತಿ ಪ್ರೋತ್ಸಾಹ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಸಣ್ಣ ಪ್ರಮಾಣದ ವ್ಯಾಪಾರಸ್ಥರಿಗೆ 100000ರೂ ಸಾಲವನ್ನು ಶೇಕಡ 4% ಬಡ್ಡಿ ದರದಲ್ಲಿ ನೀಡಲಾಗಿದ್ದು, ಇದರಲ್ಲಿ 50000ರೂ ಸಾಲ ಮತ್ತು 50000ರೂ ಸಹಾಯಧನವನ್ನು ನೀಡಲಾಗುತ್ತಿದೆ. ಈ ಯೋಜನೆ ಅಡಿಯಲ್ಲಿ ಒಟ್ಟಾರು 765 ಅರ್ಜಿಗಳು ಸ್ವೀಕರಿಸಲಾಗಿದ್ದು ಈ ಪೈಕಿ ಆಯ್ಕೆಯಾದ 5 ಜನರಿಗೆ ಸಾಲದ ಚೆಕ್ಕನ್ನು ವಿತರಿಸಲಾಯಿತು.
  4. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ವೈಯಕ್ತಿಕ ಕೊಳವೆ ಬಾವಿಯನ್ನು ಕೊರಿಸಲು 1 ಎಕರೆಯವರೆಗೆ ಕೃಷಿ ಜಮೀನನ್ನು ಹೊಂದಿದವರಿಗೆ 300000ರೂ ಸಾಲವನ್ನು ಶೇಕಡ 4% ಬಡ್ಡಿ ದರದಲ್ಲಿ ನೀಡಲಾಗಿದ್ದು, ಇದರಲ್ಲಿ 75000ರೂ ವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಗೆ ಹಣ ಪಾವತಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಒಟ್ಟಾರು 7 ಅರ್ಜಿಗಳು ಸ್ವೀಕರಿಸಲಾಗಿದ್ದು ಈ ಪೈಕಿ ಆಯ್ಕೆಯಾದ ಇಬ್ಬರಿಗೆ ಸಾಲದ ಚೆಕ್ಕನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...