Saturday, December 6, 2025
Saturday, December 6, 2025

Shivamogga News ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿಮಾಡಿ ಶಿವಮೊಗ್ಗ ಕ್ಷೇತ್ರದ ಹೆದ್ದಾರಿ ಯೋಜನೆ ಬಗ್ಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿ ಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು.

1) ಆಗುಂಬೆಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ.

2) ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗು ಭಾರಿ ಸೇತುವೆ ನಿರ್ಮಾಣ.

3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ.

4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...