Sunday, December 14, 2025
Sunday, December 14, 2025

Shivamogga News ಕಾಂತರಾಜ ಆಯೋಗದ ವರದಿ ನೆನೆಗುದಿಗೆ ಬಿದ್ದಿರುವುದು ವಿಷಾದ- ಆರ್.ಕೆ.ಸಿದ್ಧರಾಮಣ್ಣ

Date:

ಶಿವಮೊಗ್ಗ : ನೆನೆಗುದಿಗೆ ಬಿದ್ದಿರುವ ಕಾಂತರಾಜ ಆಯೋಗದ ವರದಿಯನ್ನು ಕೂಡಲೇ ಜಾರಿಗೆ ತರುವಂತೆ ಒತ್ತಾಯಿಸಿ ಬರುವ ಜುಲೈ-18 ರಂದು ಗುರುವಾರ ಪ್ರತಿಭಟನಾ ಕಾಯ೯ಕ್ರಮ ಹಮ್ಮಿಕೊಳ್ಳಲು ಹಿಂದುಳಿದ ವರ್ಗಗಳ ಸಂಘಟನೆಗಳು ತೀಮಾ೯ನಿಸಿವೆ.

ಈ ಸಂಬಂಧ ನಿನ್ನೆ ಸಂಜೆ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಏಪಾ೯ಟಾಗಿದ್ದ ಹಿಂದುಳಿದ ಜನ ಜಾಗೃತಿ ವೇದಿಕೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಸಣ್ಣ ಹಿಂದುಳಿದ ಹಾಗು ಅತಿ ಸಣ್ಣ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ ಸಂಯುಕ್ತ ಸಭೆಯಲ್ಲಿ ನಿಣ೯ಯ ಕೈಗೊಳ್ಳಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ಧರಾಮಣ್ಣ ಕಾಂತರಾಜ ಆಯೋಗದ ವರದಿ ನೆನೆಗುದಿಗೆ ಬಿದ್ದಿರುವುದು ತೀರಾ ವಿಷಾದದ ಸಂಗತಿ ಈ ಬಗ್ಗೆ ಮುಂದಿನ ಅಗತ್ಯ ಕ್ರಮಕ್ಕೆ ಒತ್ತಾಯಿಸಬೇಕಿರುವುದು ಹಿಂದುಳಿದ ವರ್ಗಗಳ ಜವಾಬ್ದಾರಿ ಆದುದರಿಂದ ಹಿಂದುಳಿದ‌ ಜಾತಿ-ವರ್ಗಗಳ ಜನರು ಒಗ್ಗಟ್ಟಾಗಿ ಸಕಾ೯ರದ ಮೇಲೆ ಒತ್ತಡ ಹಾಕುವತ್ತ ಸಂಘಟಿತರಾಗಬೇಕೆಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಬಹು ನಿರೀಕ್ಷಿತ ಕಾಂತರಾಜ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗಾಗಲೇ ಸ್ವೀಕರಿಸಿದ್ದು ವರದಿ ಅನುಷ್ಠಾನಗೊಳಿಸಲು ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಬಗ್ಗೆ ಕಾಯೋ೯ನುಖರಾಗುವಂತೆ ಒತ್ತಾಯಿಸುವ ಕೆಲಸವನ್ನು ನಾವುಗಳು ಒಗ್ಗೂಡಿ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಚಂದ್ರಪ್ಪ, ಪ್ರೊ.‌ ಪರಮೇಶ್ವರಪ್ಪ, ನಿವೃತ್ತ ಅಧಿಕಾರಿ ಶ್ರೀನಿವಾಸ್ ಭದ್ರಾವತಿ, ಚನ್ನವೀರಪ್ಪ ಗಾಮನಗಟ್ಟಿ, ಮಂಜುನಾಥ್, ಜಯಣ್ಣ ಇತರರು ಪಾಲ್ಗೊಂಡಿದ್ದರು. ಆರಂಭದಲ್ಲಿ ಸಂಚಾಲಕ ಆರ್.ಟಿ. ನಟರಾಜ್ ಸ್ವಾಗತಿಸಿ ಸಭೆಯ ಉದ್ದೇಶ ವಿವರಿಸಿದರು, ಕೊನೆಯಲ್ಲಿ ಮತ್ತೋವ೯ ಸಂಚಾಲಕ ಬಿ. ಜನಮೇಜಿರಾವ್ ವಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...