Wednesday, July 16, 2025
Wednesday, July 16, 2025

Shivamogga News ಕಾಂತರಾಜ ಆಯೋಗದ ವರದಿ ನೆನೆಗುದಿಗೆ ಬಿದ್ದಿರುವುದು ವಿಷಾದ- ಆರ್.ಕೆ.ಸಿದ್ಧರಾಮಣ್ಣ

Date:

ಶಿವಮೊಗ್ಗ : ನೆನೆಗುದಿಗೆ ಬಿದ್ದಿರುವ ಕಾಂತರಾಜ ಆಯೋಗದ ವರದಿಯನ್ನು ಕೂಡಲೇ ಜಾರಿಗೆ ತರುವಂತೆ ಒತ್ತಾಯಿಸಿ ಬರುವ ಜುಲೈ-18 ರಂದು ಗುರುವಾರ ಪ್ರತಿಭಟನಾ ಕಾಯ೯ಕ್ರಮ ಹಮ್ಮಿಕೊಳ್ಳಲು ಹಿಂದುಳಿದ ವರ್ಗಗಳ ಸಂಘಟನೆಗಳು ತೀಮಾ೯ನಿಸಿವೆ.

ಈ ಸಂಬಂಧ ನಿನ್ನೆ ಸಂಜೆ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಏಪಾ೯ಟಾಗಿದ್ದ ಹಿಂದುಳಿದ ಜನ ಜಾಗೃತಿ ವೇದಿಕೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಸಣ್ಣ ಹಿಂದುಳಿದ ಹಾಗು ಅತಿ ಸಣ್ಣ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ ಸಂಯುಕ್ತ ಸಭೆಯಲ್ಲಿ ನಿಣ೯ಯ ಕೈಗೊಳ್ಳಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ಧರಾಮಣ್ಣ ಕಾಂತರಾಜ ಆಯೋಗದ ವರದಿ ನೆನೆಗುದಿಗೆ ಬಿದ್ದಿರುವುದು ತೀರಾ ವಿಷಾದದ ಸಂಗತಿ ಈ ಬಗ್ಗೆ ಮುಂದಿನ ಅಗತ್ಯ ಕ್ರಮಕ್ಕೆ ಒತ್ತಾಯಿಸಬೇಕಿರುವುದು ಹಿಂದುಳಿದ ವರ್ಗಗಳ ಜವಾಬ್ದಾರಿ ಆದುದರಿಂದ ಹಿಂದುಳಿದ‌ ಜಾತಿ-ವರ್ಗಗಳ ಜನರು ಒಗ್ಗಟ್ಟಾಗಿ ಸಕಾ೯ರದ ಮೇಲೆ ಒತ್ತಡ ಹಾಕುವತ್ತ ಸಂಘಟಿತರಾಗಬೇಕೆಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಬಹು ನಿರೀಕ್ಷಿತ ಕಾಂತರಾಜ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗಾಗಲೇ ಸ್ವೀಕರಿಸಿದ್ದು ವರದಿ ಅನುಷ್ಠಾನಗೊಳಿಸಲು ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಬಗ್ಗೆ ಕಾಯೋ೯ನುಖರಾಗುವಂತೆ ಒತ್ತಾಯಿಸುವ ಕೆಲಸವನ್ನು ನಾವುಗಳು ಒಗ್ಗೂಡಿ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಚಂದ್ರಪ್ಪ, ಪ್ರೊ.‌ ಪರಮೇಶ್ವರಪ್ಪ, ನಿವೃತ್ತ ಅಧಿಕಾರಿ ಶ್ರೀನಿವಾಸ್ ಭದ್ರಾವತಿ, ಚನ್ನವೀರಪ್ಪ ಗಾಮನಗಟ್ಟಿ, ಮಂಜುನಾಥ್, ಜಯಣ್ಣ ಇತರರು ಪಾಲ್ಗೊಂಡಿದ್ದರು. ಆರಂಭದಲ್ಲಿ ಸಂಚಾಲಕ ಆರ್.ಟಿ. ನಟರಾಜ್ ಸ್ವಾಗತಿಸಿ ಸಭೆಯ ಉದ್ದೇಶ ವಿವರಿಸಿದರು, ಕೊನೆಯಲ್ಲಿ ಮತ್ತೋವ೯ ಸಂಚಾಲಕ ಬಿ. ಜನಮೇಜಿರಾವ್ ವಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...