Monday, December 15, 2025
Monday, December 15, 2025

Chikkamagaluru Police ಬೈಕ್ ಬಿಡಿಭಾಗ ಕದ್ದು ಮಾರುತ್ತಿದ್ದ ಖದೀಮರ ಸೆರೆ

Date:

Chikkamagaluru Police ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಹಿಡಿದಿದ್ದು ಅವರಿಂದ ಮೂರು ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಒಟ್ಟು 17 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಬೈಕ್‌ ಕಳ್ಳತನ ಪ್ರಕರಣ ಸಂಬಂಧ ವಿಶೇಷ ತಂಡ ರಚನೆ ಮಾಡಲಾಗಿತ್ತು.

ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಕಲೈಮಾರ್ ಮತ್ತು ಪಿಎಸ್ಐ ಬಾಬುದ್ದೀನ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಿಂಗಮೂರ್ತಿ, ಮಧಸೂಧನ್, ನಂಜಪ್ಪ, ಮಧುಕುಮಾರ್, ಪ್ರದೀಪ ಮತ್ತು ನವೀನ ಅವರ ತಂಡ ಇದೀಗ ಕಳ್ಳರ ಗ್ಯಾಂಗ್‌ನ್ನು ಹಿಡಿದಿದ್ದಾರೆ.
Chikkamagaluru Police ಈ ಸಂಬಂಧ ಮೂವರನ್ನ ಬಂಧಿಸಿರುವ ಪೊಲೀಸರು ರೂ. 8.5 ಲಕ್ಷ ಬೆಲೆಯ 17 ಬೈಕ್ ಗಳು, ರೂ. 2.15 ನಗದು ಮತ್ತು ರೂ. 50 ಸಾವಿರ ಮೌಲ್ಯದ ಬೈಕ್ ಬಿಡಿಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶೇಷ ಅಂದರೆ ಆರೋಪಿಗಳು ಬೈಕ್‌ಗಳನ್ನು ಕದ್ದು ಅದನ್ನ ಗುಜರಿಗೆ ಹಾಕುತ್ತಿದ್ದರು. ವಾಹನಗಳ ಬಿಡಿಭಾಗಗಳನ್ನ ವಿಂಗಡಿಸಿ ಅವುಗಳನ್ನ ಮಾರಲಾಗುತ್ತಿತ್ತು.
ಆರೋಪಿಗಳು ಚಿಕ್ಕಮಗಳೂರು ನಗರದಲ್ಲಿ 22, ಕಡೂರು ಪಟ್ಟಣದಲ್ಲಿ 1, ತರೀಕೆರೆ ಪಟ್ಟಣದಲ್ಲಿ 1, ಶಿವಮೊಗ್ಗ ನಗರದಲ್ಲಿ 2, ಭದ್ರಾವತಿಯಲ್ಲಿ 2 ಹಾಗೂ ದಾವಣಗೆರೆಯಲ್ಲಿ 2 ಬೈಕ್’ಳನ್ನು ಕಳವು ಮಾಡಿದ್ದಾರೆ. ಅವುಗಳಲ್ಲಿ 17 ಬೈಕ್ ಸುಸ್ಥಿತಿಯಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...