Sunday, October 6, 2024
Sunday, October 6, 2024

Shivaganga Yoga Centre ಯೋಗ, ಧ್ಯಾನಗಳಿಂದ ವ್ಯಕ್ತಿ ಪರಿಪೂರ್ಣ-ಆರತಿ ಆಮ ಪ್ರಕಾಶ್

Date:

Shivaganga Yoga Centre ಯೋಗ, ಧ್ಯಾನ ಹಾಗೂ ಪ್ರಾಣಾಯಾಮದಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ನಮ್ಮ ದೇಹದಲ್ಲಿ ನಮಗೆ ಗೊತ್ತಿಲ್ಲದೇ ಇರುವ ಕಾಯಿಲೆಗಳು ಯೋಗಾಸನದಿಂದ ದೂರವಾಗುತ್ತವೆ ಎಂದು ಮಹಾನಗರ ಪಾಲಿಕೆ ಸದಸ್ಯೆ ಆರತಿ ಆಮ ಪ್ರಕಾಶ್ ಹೇಳಿದರು.

ರವೀಂದ್ರ ನಗರ ಸರಸ್ವತಿ ಮಂದಿರದಲ್ಲಿ ಶಿವಗಂಗಾ ಯೋಗ ಕೇಂದ್ರ ರಾಘವ ಶಾಖೆ ವತಿಯಿಂದ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಯೋಗ ಅಭ್ಯಾಸದಿಂದ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ಸದಾ ಉತ್ಸಾಹ ಹಾಗೂ ಲವಲವಿಕೆಯಿಂದ ಇರಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಯೋಗದಿಂದ ನಮಗೆ ಸಕಾರಾತ್ಮಕ ಭಾವನೆ ಜತೆಗೆ ಒಳ್ಳೆಯ ನಿದ್ರೆ ಹಾಗೂ ಆಹಾರ ಸೇವನೆಗೆ ದಾರಿದೀಪವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗವನ್ನು ಅಭ್ಯಾಸ ಮಾಡಬೇಕು. ಪ್ರಾತಃಕಾಲದಲ್ಲಿ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದು ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಪ್ರೇರಣ ಮಹಿಳಾ ಸಂಸ್ಥೆ ಅಧ್ಯಕ್ಷೆ ಪುಷ್ಪಲತಾ ಮೂರ್ತಿ ಮಾತನಾಡಿ, ಮಹಿಳೆಯರಿಗೆ ಯೋಗಾಸನದಿಂದ ತುಂಬಾ ಲಾಭಗಳಿವೆ. ಖಿನ್ನತೆ ದೂರವಾಗುವುದರ ಜತೆಗೆ ಸದಾ ಆರೋಗ್ಯದಿಂದ ಇರಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆಯರು ಸಹ ಯೋಗ ಮಾಡುವುದರಿಂದ ಸಾಕಷ್ಟು ದೇಹದಲ್ಲಿರುವ ಸಮಸ್ಯೆಗಳನ್ನು ಗುಣಪಡಿಸಿಕೊಳ್ಳಬಹುದು ಎಂದು ಹೇಳಿದರು.
ಮಂಜುಳಾ ರಾಯ್ಕರ್ ಮಾತನಾಡಿ, ನಾನು ಯೋಗದಿಂದ ಉತ್ತಮ ಆರೋಗ್ಯ ಸಂಪಾದನೆ ಮಾಡಿಕೊಂಡಿದ್ದೇನೆ. ಯೋಗದಿಂದ ಸಂಸ್ಕಾರದ ಜತೆಗೆ ಆಧ್ಯಾತ್ಮದ ಒಲವು ಸಹ ಸಿಗುತ್ತದೆ. ಮನಸ್ಸು ಸದಾ ಪ್ರಶಾಂತವಾಗಿ ಇರುತ್ತದೆ ಎಂದು ತಿಳಿಸಿದರು.

Shivaganga Yoga Centre ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯ ಜಿ.ಎಸ್.ಓಂಕಾರ್, ಹರೀಶ್, ವಿಜಯ ಕೃಷ್ಣ, ಜಿ.ವಿಜಯಕುಮಾರ್, ನರ್ಸೋಜಿ ರಾವ್, ಶ್ರೀನಿವಾಸ್, ಗಾಯತ್ರಿ ರಮೇಶ್, ಸುಜಾತಾ ಮಧುಕರ್, ಶೋಭಾ. ಶಂಕರ್, ಬಿಂದು ವಿಜಯಕುಮಾರ್, ಮಹೇಶ್, ಶೈಲಜಾ ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...