Thursday, September 17, 2026
Thursday, September 17, 2026

D.K.Shivakumar ಮೂಡಾ ಹಗರಣದ ಬಗ್ಗೆ ಸಚಿವ ಎಚ್ ಡಿ ಕೆ ಹೇಳಿಕೆಗೆ ಡಿಕೆಶಿ ಖಾರದ ನುಡಿ

Date:

D.K.Shivakumar ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂಬ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ‌ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಪತ್ನಿ ಹೆಸರಿಗೆ ನಿವೇಶನ ಹಂಚಿಕೆಯಾಗಿರುವ ಮೈಸೂರಿನ ಮೂಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಈ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದರು.

ಸಿಡಿ ಫ್ಯಾಕ್ಟರಿ ನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.

D.K.Shivakumar ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಅದೇ ರೀತಿಯ ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...