Friday, March 20, 2026
Friday, March 20, 2026

Kote Police Station ಕೋಟೆ ಪೊಲೀಸ್ ಠಾಣೆ ಮುಖಾಂತರ ಕೇಸ್ ದಾಖಲು: ಅಪರಾಧಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟ

Date:

Kote Police Station ಶಿವಮೊಗ್ಗ ನಗರದ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹ್ಮದ್ ಜೈದಾನ್ ಎನ್ನುವವನನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗಳಿಗೆ ಒಳಗಾದದವರಿಗೆ ಮತ್ತೊಂದು ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ.

ಜೈದಾನ್ ಕೊಲೆ ಮಾಡಿದ್ದ ಮೊಹಮ್ಮದ್ ನಾಖೇಶ್ ಶಾ ಅಲಿ ಯಾನೆ ನಖೈ ಮತ್ತು ಅಬು ಸಲೇಹ್ ಗೆ ಹಾಫ್ ಮರ್ಡರ್ ಕೇಸ್ ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ಮತ್ತು ತಲಾ 15 ವರ್ಷ ಶಿಕ್ಷೆ ಪ್ರಕಟವಾಗಿದೆ.‌

ಶಿವಮೊಗ್ಗ ಟೌನ್ ಲಕ್ಷರ್ ಮೊಹಲ್ಲಾದ ವಾಸಿಗಳಾದ ಮೊಹಮ್ಮದ್ ನಾಖೇಶ ಅಲಿ ಮತ್ತು ಅಬು ಸಲೇಹ್ ರವರುಗಳು ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಲಷ್ಕರ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯೂಸೂಫ್(50) ಅವರನ್ನು ಅಲ್ ಹಿಲಾಲ್ ಶಾಲೆಯ ಹತ್ತಿರ ಅವಾಚ್ಯ ಶಬ್ದಗಳಿಂದ ಬೈದು, ಚಾಕುವಿನಿಂದ ಬಲ ದವಡೆಗೆ ಚುಚ್ಚಿ ಮಾರಣಾಂತಿಕ ಹಲ್ಲೆ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.‌

ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಶಿವಪ್ರಸಾದ್, ಪಿಎಸ್ಐ, ಕೋಟೆ ಪೊಲೀಸ್ ಠಾಣೆ ಮತ್ತು ಶಿವಾನಂದ್ ಕೆ, ಪಿಎಸ್ಐ, ಕೋಟೆ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.‌
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕ ಸುರೇಶ್ ಕುಮಾರ ವಾದ ಮಂಡಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶ ಮಂಜುನಾಥ್ ನಾಯಕ್ ರವರು ಶಿಕ್ಷೆ ಪ್ರಕಟಿಸಿದ್ದಾರೆ.‌

Kote Police Station ಆರೋಪಿತರಾದ 1) ಮೊಹಮ್ಮದ್ ನಾಖೇಶ್ ಶಾ ಅಲಿ @ ನಖೈ, 19 ವರ್ಷ, ಲಕ್ಷರ್ ಮೊಹಲ್ಲಾ, ಶಿವಮೊಗ್ಗ ಮತ್ತು 2) ಅಬು ಸಲೇಹ್, 20 ವರ್ಷ, ಲಕ್ಷರ್ ಮೊಹಲ್ಲಾ, ಶಿವಮೊಗ್ಗ ಇವರುಗಳಿಗೆ 05 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ ರೂ 15,000/- ದಂಡ, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 06 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...