Sunday, December 14, 2025
Sunday, December 14, 2025

Linganamakki Dam ಖುಷಿ ತಂದ ಆರಿದ್ರಾ ಮಳೆ : ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ1763.40 ಅಡಿ

Date:

Linganamakki Dam ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರಾ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ನಾಲ್ಕೈದು ದಿನಗಳಿಂದ ವರುಣ ಆರ್ಭಟಿಸುತ್ತಿರುವದರಿಂದ ಕೆರೆ-ಕಟ್ಟೆಗಳು ತುಂಬಿವೆ. ಬಿಡುವು ಮಾಡಿ ಕೊಟ್ಟು ಮಳೆ ಬರುತ್ತಿರುವುದರಿಂದ ಬೇಸಾಯಕ್ಕೆ ಅನುಕೂಲಕರವಾಗುತ್ತಿದೆ. ಇದರಿಂದ ಭತ್ತದ ಬಿತ್ತನೆ, ನಾಟಿ ಕಾರ್ಯ ಜೋರಾಗಿದೆ.
ಧಾರಾಕಾರ ಮಳೆ ಸುರಿಯುತ್ತಿದ್ದು ಕೆರೆ-ಕಟ್ಟೆ, ಡ್ಯಾಂಗಳು ಭರ್ತಿಯಾಗುತ್ತಿವೆ. ಜೋಗ ಜಲಪಾತಕ್ಕೂ ಮತ್ತೆ ಜೀವಕಳೆ ಬಂದಿದೆ.ಲಿAಗನಮಕ್ಕಿ ಜಲನಯನ ಭಾಗದಲ್ಲಿ ಉತ್ತಮವಾದ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಇದರಿಂದ ರಾಜ, ರಾಣಿ, ರೋರರ್ ಲೇಡಿಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಇದರಿಂದ ಪ್ರವಾಸಿಗರ ಕಣ್ಣಿಗೆ ಹಬ್ಬದಂತಾಗಿದೆ.

ಅಣೆಕಟ್ಟೆಗಳಿಗೆ ಹೆಚ್ಚಿನ ಒಳ ಹರಿವು: ಮಳೆಯಿಂದ ಜಿಲ್ಲೆಯ ಎಲ್ಲಾ ಅಣೆಕಟ್ಟೆಗಳಲ್ಲಿನ ಒಳ ಹರಿವು ಹೆಚ್ವಾಗಿದೆ. ತುಂಗಾ ಅಣೆಕಟ್ಟೆಗೆ ೪೦ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅದೇ ರೀತಿ ೧೫ ಕ್ರಸ್ಟ್ ಗೇಟ್ ಮೂಲಕ ನದಿಗೆ ೪೦ ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಭದ್ರಾ ಅಣೆಕಟ್ಟೆಗೆ ೪.೦೯೮ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ೩೪೮ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ೬೦.೨೩೮ ಕ್ಯೂಸಕ್ ನೀರು ಹರಿದು ಬಂದಿದೆ. ನದಿ ಸೇರಿದಂತೆ ವಿದ್ಯುತ್?ಗೆ ೫೮೬ .೨೪ ಕ್ಯೂಸೆಕ್ ನೀರು ಅಣೆಕಟ್ಟೆಯಿಂದ ಹೊರಕ್ಕೆ ಹೋಗುತ್ತಿದೆ. ವರಾಹಿ ಮಾಣಿ ಅಣೆಕಟ್ಟೆಗೆ ೮.೩೨೪ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೆರೆ-ಕಟ್ಟೆಗಳು ನಳನಳಿಸುತ್ತಿವೆ.

Linganamakki Dam ನೀರಿನ ಮಟ್ಟದ ವಿವರ:
ಲಿಂಗನಮಕ್ಕಿ ಅಣೆಕಟ್ಟೆ:

ಒಟ್ಟು ಎತ್ತರ – ೧೮೧೯
ಇಂದಿನ ನೀರಿನ ಮಟ್ಟ – ೧೭೬೩.೪೦ ಅಡಿ
ಒಳ ಹರಿವು – ೪೪.೦೨೪ ಕ್ಯೂಸೆಕ್
ಹೊರ ಹರಿವು – ೧೪೪೦.೮೪ ಕ್ಯೂಸೆಕ್
ಕಳೆದ ವರ್ಷ – ೧೭೪೨.೬೫ ಅಡಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...