Wednesday, July 29, 2026
Wednesday, July 29, 2026

CM Siddaramaiah ಭಾರತ್ ಅಕ್ಕಿ, ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ಸರಬರಾಜು. ಈಗ ಇಲ್ಲ- ಸಿದ್ಧರಾಮಯ್ಯ ಕಿಡಿ

Date:

CM Siddaramaiah ರಾಜ್ಯಕ್ಕೆ ಎಂಆರ್‌ಪಿ ದರದಲ್ಲಿ 29 ರೂ.ಗೆ ಕೆಜಿ ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಭಾರತ್ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದರ ವಿರುದ್ಧ ನಾವು ಪ್ರತಿಭಟನೆ ಪ್ರಾರಂಭಿಸುತ್ತೇವೆ. ಅವರ ಬಳಿ ಅಕ್ಕಿ ದಾಸ್ತಾನು ಇದ್ದರೂ ಅಕ್ಕಿ ನೀಡುತ್ತಿಲ್ಲ ಎಂದರೆ ಅದು ರಾಜಕೀಯ ಎಂದು ತಿರುಗೇಟು ನೀಡಿದ್ದಾರೆ.
CM Siddaramaiah ಚುನಾವಣೆ ಉದ್ದೇಶದಿಂದ ಭಾರತ್ ಅಕ್ಕಿಯ ಮಾರಾಟ ಮಾಡಲಾಯಿತು. ಚುನಾವಣೆ ಮುಗಿದ ಮೇಲೆ ಅದನ್ನು ನಿಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ. ಅಕ್ಕಿಯ ದಾಸ್ತಾನು ಇಲ್ಲದಿದ್ದರೆ ಅದು ಅರ್ಥವಾಗುವಂತಹದ್ದು. ಆದರೆ ಅವರ ಬಳಿ ಅಕ್ಕಿ ಇದ್ದರೂ ಅದನ್ನು ನೀಡುತ್ತಿಲ್ಲ. ‘ಅನ್ನ ಭಾಗ್ಯ’ದ ಉಚಿತ ಅಕ್ಕಿ ಅಕ್ಕಿ ನೀಡುವಂತೆ ನಾವು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದಾಗ ಅವರು ಭಾರತೀಯ ಆಹಾರ ನಿಗಮದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಅವರು ನೀಡಲು ನಿರಾಕರಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

”ಕೇಂದ್ರ ಸರ್ಕಾರ ದಲಿತರು, ಬಡವರು ಮತ್ತು ಹಿಂದುಳಿದವರ ಜೊತೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ರಾಜ್ಯ ಸರ್ಕಾರವು ಸಮಾಜದ ಬಡವರಿಗೆ ಅನ್ನ ನೀಡಲು ಬಯಸಿದಾಗ ಅವರು ಅಕ್ಕಿ ನೀಡಲು ನಿರಾಕರಿಸಿದರು” ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ನಾವು ಅಕ್ಕಿ ಖರೀದಿಸಲು ಸಿದ್ಧರಿದ್ದರೂ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಕರ್ನಾಟಕಕ್ಕೆ ಕೊಡುತ್ತಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....