Monday, February 2, 2026
Monday, February 2, 2026

Bus Accident ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಮಾರ್ಗ ಮಧ್ಯೆ ಸಾಗುತ್ತಿದ್ದ ವಾಹನ ಸವಾರರಿಂದ ನೆರವು-ರಕ್ಷಣೆ

Date:

Bus Accident ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕರೆಂಟ್‌ ವಯರ್‌ ಬಸ್‌ ಮೇಲೆ ಬಿದ್ದು, ಹಲವರಿಗೆ ಗಾಯಗಳಾದ ಘಟನೆ ಕಳೆದ ರಾತ್ರಿ ಇಲ್ಲಿ ಸಂಭವಿಸಿದೆ.

ತಕ್ಷಣವೇ ಅಲ್ಲಿದ್ದವರು ಮೆಸ್ಕಾಂಗೆ ಕರೆ ಮಾಡಿ ವಿದ್ಯುತ್‌ ಕಟ್‌ ಮಾಡಿಸಿದ ಪರಿಣಾಮ ಯಾರಿಗೂ ಅಪಾಯವಾಗಿಲ್ಲ.
ಆಕಸ್ಮಾತ್‌ ಆಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗೆರೆ ಕ್ರಾಸ್‌ ಬಳಿಯಲ್ಲಿ ಒಮಿನಿ ಕಾರಿಗೆ ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ವಿದ್ಯುತ್‌ ವಯರ್‌ ಬಸ್‌ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್‌ ಪ್ರವಹಿಸುತ್ತಿತ್ತು.
ಪ್ರಯಾಣಿಕರ ರಕ್ಷಣೆ :
ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ವೆಹಿಕಲ್‌ಗಳ ಸವಾರರು ತಮ್ಮ ವಾಹನ ನಿಲ್ಲಿಸಿ ರಕ್ಷಣೆಗೆ ದೌಡಾಯಿಸಿದ್ದಾರೆ.

Bus Accident ಮೆಸ್ಕಾಂಗೆ ಕರೆ ಮಾಡಿ ವಿದ್ಯುತ್‌ ಹರಿವಿಕೆಯನ್ನ ನಿಲ್ಲಿಸಿದ್ದಾರೆ. ಆ ಬಳಿಕ ಬಸ್‌ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರಿಗೆ ಪ್ರಾಥಮಿಕ ಚಿಕಿತ್ಸೆ ನೆರವಾಗಿ ಆಂಬುಲೆನ್ಸ್‌ ಕರೆಸಿ, ಅವರನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಚಾಲಕನಿಗೆ ಗಂಭಿರ ಗಾಯವಾಗಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...