Thursday, August 13, 2026
Thursday, August 13, 2026

Bus Accident ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಮಾರ್ಗ ಮಧ್ಯೆ ಸಾಗುತ್ತಿದ್ದ ವಾಹನ ಸವಾರರಿಂದ ನೆರವು-ರಕ್ಷಣೆ

Date:

Bus Accident ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕರೆಂಟ್‌ ವಯರ್‌ ಬಸ್‌ ಮೇಲೆ ಬಿದ್ದು, ಹಲವರಿಗೆ ಗಾಯಗಳಾದ ಘಟನೆ ಕಳೆದ ರಾತ್ರಿ ಇಲ್ಲಿ ಸಂಭವಿಸಿದೆ.

ತಕ್ಷಣವೇ ಅಲ್ಲಿದ್ದವರು ಮೆಸ್ಕಾಂಗೆ ಕರೆ ಮಾಡಿ ವಿದ್ಯುತ್‌ ಕಟ್‌ ಮಾಡಿಸಿದ ಪರಿಣಾಮ ಯಾರಿಗೂ ಅಪಾಯವಾಗಿಲ್ಲ.
ಆಕಸ್ಮಾತ್‌ ಆಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗೆರೆ ಕ್ರಾಸ್‌ ಬಳಿಯಲ್ಲಿ ಒಮಿನಿ ಕಾರಿಗೆ ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ವಿದ್ಯುತ್‌ ವಯರ್‌ ಬಸ್‌ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್‌ ಪ್ರವಹಿಸುತ್ತಿತ್ತು.
ಪ್ರಯಾಣಿಕರ ರಕ್ಷಣೆ :
ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ವೆಹಿಕಲ್‌ಗಳ ಸವಾರರು ತಮ್ಮ ವಾಹನ ನಿಲ್ಲಿಸಿ ರಕ್ಷಣೆಗೆ ದೌಡಾಯಿಸಿದ್ದಾರೆ.

Bus Accident ಮೆಸ್ಕಾಂಗೆ ಕರೆ ಮಾಡಿ ವಿದ್ಯುತ್‌ ಹರಿವಿಕೆಯನ್ನ ನಿಲ್ಲಿಸಿದ್ದಾರೆ. ಆ ಬಳಿಕ ಬಸ್‌ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರಿಗೆ ಪ್ರಾಥಮಿಕ ಚಿಕಿತ್ಸೆ ನೆರವಾಗಿ ಆಂಬುಲೆನ್ಸ್‌ ಕರೆಸಿ, ಅವರನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಚಾಲಕನಿಗೆ ಗಂಭಿರ ಗಾಯವಾಗಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...