Friday, March 20, 2026
Friday, March 20, 2026

Gopalakrishna Belur ಶರಾವತಿ ಹಿನ್ನೀರು ಪ್ರದೇಶದ ಜನತೆ ಆಶೋತ್ತರಗಳ ಬಗ್ಗೆ ಗಮನ ಹರಿಸಲು ಆಧಿಕಾರಿಗಳಿಗೆ ಆಗ್ರಹಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Date:

Gopalakrishna Belur ಶರಾವತಿ ಹಿನ್ನೀರು ಪ್ರದೇಶದ ಜನರು ಕತ್ತಲಿನಲ್ಲಿ ಇರಬಾರದು. ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ಕಳೆದುಕೊಂಡ ಹಿನ್ನೀರಿನ ಜನರಿಗೆ ದಿನದ ೨೪ ಗಂಟೆ ವಿದ್ಯುತ್ ಕೊಡುವುದು ನಮ್ಮ ಕರ್ತವ್ಯ. ಮೆಸ್ಕಾಂ ಅಧಿಕಾರಿಗಳು ತುಮರಿ ಸೇರಿದಂತೆ ಶರಾವತಿ ಹಿನ್ನೀರು ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವು ಬೆಳಕಿನಲ್ಲಿದ್ದು ಹಿನ್ನೀರಿನ ಜನರು ಕತ್ತಲಿನಲ್ಲಿರುವುದು ಎಂತಹ ನ್ಯಾಯ. ಅವರ ಸಮಸ್ಯೆಗೆ ಸ್ಪಂದಿಸಿ ಎಂದು ಸೂಚನೆ ನೀಡಿದರು.
Gopalakrishna Belur ಮಳೆಗಾಲ ಪ್ರಾರಂಭವಾಗಿದ್ದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹೆಚ್ಚು ಜಾಗೃತೆಯಿಂದ ಕೆಲಸ ಮಾಡಬೇಕು. ರೈತರ ಯಾವುದೇ ದೂರುಗಳು ನನ್ನತನಕ ಬರಬಾರದು. ಸೊಸೈಟಿ ಮೂಲಕ ಗೊಬ್ಬರವನ್ನು ರೈತರಿಗೆ ಕೊಡಲು ಈಗಾಗಲೆ ಅಗತ್ಯಕ್ರಮ ಕೈಗೊಳ್ಳಲಾಗಿದೆ. ಬೆಳೆವಿಮೆ ಬಗ್ಗೆ ರೈತರಿಗೆ ಮಾಹಿತಿ ನೀಡಿ ಹೆಚ್ಚು ರೈತರು ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೆಪಿಸಿ. ಮಣ್ಣು ಪರೀಕ್ಷೆಯನ್ನು ಕಾಲಕಾಲಕ್ಕೆ ನಡೆಸಿ ರೈತರು ಉತ್ತಮ ಫಸಲು ತೆಗೆಯಲು ನೆರವಾಗಿ ಎಂದು ಸೂಚಿಸಿದ ಬೇಳೂರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ನೂರಾರು ಕೋಟಿ ಖರ್ಚು ಮಾಡಿದೆ. ನಿಗಧಿತ ಅವಧಿಯಲ್ಲಿ ಗ್ರಾಮಗಳಿಗೆ ನೀರು ಹರಿಸಬೇಕು. ಮುಂದಿನ ಏಪ್ರಿಲ್‌ನೊಳಗೆ ಆವಿನಹಳ್ಳಿ, ಭಾರಂಗಿ ಮತ್ತು ಕಸಬಾ ಹೋಬಳಿಗೆ ನೀರು ಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...